ಬೆಂಗಳೂರು: ಮಾರಕ ಕೊರೊನಾ ವೈರಸ್​ ಸೋಂಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಹಿವಾಟಿಗೆ ದೊಡ್ಡ ಪೆಟ್ಟು ನೀಡಿದೆ.
ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್​ ಸೋಂಕು ಹೊಂದಿರುವ ವ್ಯಕ್ತಿ ಪತ್ತೆಯಾದ ನಂತರ ರಾಜ್ಯದ ವಿವಿಧ ಕಡೆಗಳಲ್ಲಿ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರ ಸಂಖ್ಯೆ ಶೇ.50 ಕುಸಿದಿದೆ. ಬೆಂಗಳೂರಿಗೆ ತೆರಳಿದರೆ ವೈರಸ್​ ಸೋಂಕು ಹರಡಬಹುದು ಎಂದು ಪ್ರಯಾಣಿಕರು ಪ್ರಯಾಣವನ್ನು ಮುಂದೂಡುತ್ತಿದ್ದಾರೆ. ಇದರಿಂದ ಬಸ್​ಗಳು ಖಾಲಿಯಾಗಿ ಸಂಚರಿಸುತ್ತಿವೆ ಎಂದು ಕೆಎಸ್​ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಬುಕ್ಕಿಂಗ್​ ಕೂಡ ಕುಸಿತ: ವೋಲ್ವೋ ಹಾಗೂ ರಾಜಹಂಸ ಬಸ್​ಗಳ ಟಿಕೆಟ್​ ಬುಕಿಂಗ್​ ಕೂಡ ಕುಸಿದಿದೆ. ವಿವಿಧ ಜಿಲ್ಲಾ ಕೇಂದ್ರಗಳಿಂದ ಪ್ರತಿನಿತ್ಯ ಅಂದಾಜು 15 ಸೀಟುಗಳು ಬುಕ್ಕಿಂಗ್​ ಆಗುತ್ತಿದ್ದರೇ ಈಗ ಕೇವಲ 4ರಿಂದ 5 ಸೀಟುಗಳು ಮಾತ್ರ ಬುಕ್ಕಿಂಗ್ ಆಗತ್ತಿವೆ. ಅಡ್ವಾನ್ಸ್​ ಬುಕ್ಕಿಂಗ್​ ಕೂಡ ಆಗುತ್ತಿಲ್ಲ. (ದಿಗ್ವಿಜಯ ನ್ಯೂಸ್​)

ಮಾಸ್ಕ್​ ಕಾಮಣ್ಣನಿಗೆ ಹೋಳಿ ಪೂಜೆ; ದಹನವಾಗುತ್ತಿದ್ದಾಗಲೂ ಬಾಯಿ, ಮೂಗು ಮುಚ್ಚಿಕೊಂಡೇ ಇದ್ದ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 7 =
Remember me
