ಬೆಂಗಳೂರು: ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ನಡುವಿನ ಮುಸುಕಿನ ಗುದ್ದಾಟಕ್ಕೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ತೆರೆ ಎಳೆದಿದ್ದಾರೆ.
ರಾಜ್ಯದಲ್ಲಿ ಕರೊನಾ ವೈರಸ್​ ಸೋಂಕು ಬಗ್ಗೆಯ ಎಲ್ಲ ಮಾಹಿತಿಯನ್ನು ಇನ್ನು ಮುಂದೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ನೀಡುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ.
ತಮ್ಮ ಸಂಪುಟದ ಸಚಿವರೊಂದಿಗೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಅವರು ಕರೊನಾ ವೈರಸ್​ ಬಗ್ಗೆ ಎಲ್ಲ ಮಾಹಿತಿಯನ್ನು ನೀಡುವಂತೆ ಸಚಿವ ಸುರೇಶ್​ ಕುಮಾರ್​ ಅವರಿಗೆ ಸೂಚಿಸಿದರು.
ಕರೊನಾ ವೈರಸ್​ ಸೋಂಕು ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್​ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿತ್ತು. ಹೀಗಾಗಿ ಅಂಕಿ-ಅಂಶ ನೀಡುವಲ್ಲಿ ದ್ವಂದ್ವ ಉಂಟಾಗುತ್ತಿತ್ತು. ಇದರಿಂದ ಸಿಎಂಗೆ ಮುಜುಗರ ಉಂಟಾಗಿತ್ತು. ಹೀಗಾಗಿ ಅವರು ಈ ಜವಾಬ್ದಾರಿಯನ್ನು ಹಿರಿಯ ಸಚಿವ ಸುರೇಶ್​ ಕುಮಾರ್​ ಅವರಿಗೆ ವಹಿಸಿದರು.
ವಿಧಾನಸೌಧದಲ್ಲಿ ಪ್ರತಿ ದಿನ ಸಂಜೆ 5.30ಕ್ಕೆ ಸಚಿವ ಸುರೇಶ್​ ಕುಮಾರ್​ ಕರೊನಾ ವೈರಸ್​ ಕುರಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ. (ದಿಗ್ವಿಜಯ ನ್ಯೂಸ್​)
ಲಾಕ್ ಡೌನ್ ಪರಿಣಾಮ: ಮದ್ಯ ಸಿಗದೆ ಮತ್ತೆ ಮೂವರ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
