ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾರಣಾಂತಿಕ ಕಾಯಿಲೆಗೆ ತುತ್ತಾಗಿರುವ ಹಾಗೂ 50 ವರ್ಷ ಮೀರಿದ ಸರ್ಕಾರಿ ನೌಕರರು ಇಚ್ಛಿಸಿದಲ್ಲಿ ರಜೆ ಪಡೆಯಬಹುದು ಎಂದು ಶಿಷ್ಠಾಚಾರ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚಿಸಿದೆ.
ಮಧುಮೇಹ, ಉಸಿರಾಟದ ತೊಂದರೆ, ಮೂತ್ರ ಪಿಂಡ ರೋಗ ಸೇರಿದಂತೆ ಇತರೆ ಮಾರಣಾಂತಿಕ ರೋಗಗಳಿಂದ ಬಳಲುತ್ತಿರುವ ಸರ್ಕಾರಿ ಅಧಿಕಾರಿಗಳು ಸುರಕ್ಷಿತ ವಲಯದಲ್ಲಿ ಇರಲು ನಿರ್ಧರಿಸಿದರೆ ಏ.4ರವರೆಗೆ ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ಹಾಜರುಪಡಿಸದೆ ರಜೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಮನೆಯಲ್ಲೇ ಇರಿ #StayHome – ಹೊರಗೆ ಬರಬೇಡಿ; ಒಳಗಿದ್ದರೂ ಅಂತರ ಕಾಯ್ದುಕೊಳ್ಳಬೇಕು ಎಂದು ಮತ್ತೊಮ್ಮೆ ಎಚ್ಚರಿಸಿದ ಪ್ರಧಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − one =
Remember me
