ಬೆಂಗಳೂರು: ಟಿಪ್ಪು ನಗರದಲ್ಲಿ ಮೃತಪಟ್ಟ ಕರೊನಾ ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಕೃ.ರಾ. ಮಾರುಕಟ್ಟೆ ವಾರ್ಡ್‌ನ ಸದಸ್ಯೆ ನಾಜೀಮ್ ಖಾನಮ್ ಹಾಗೂ ಅವರ ಕುಟುಂಬದ ಸದಸ್ಯರನ್ನು ಗೃಹಬಂಧನದಲ್ಲಿರಲು ಸೂಚಿಸಲಾಗಿದೆ.
ಮಂಗಳವಾರ ಟಿಪ್ಪುನಗರದಲ್ಲಿ ಮೃತಪಟ್ಟ ಕರೊನಾ ಸೋಂಕಿತ ವ್ಯಕ್ತಿಯೊಂದಿಗೆ ಒಟ್ಟು 75 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಅವರನ್ನು ಗುರುತಿಸಿ ಕ್ವಾರಂಟೈನ್ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಪಾಲಿಕೆ ಸದಸ್ಯೆ ನಾಜೀಮ್ ಖಾನಮ್ ಹಾಗೂ ಅವರ ಕುಟುಂಬದ ಸದಸ್ಯರೂ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಹೀಗಾಗಿ ಎಲ್ಲರನ್ನೂ ಕ್ವಾರಂಟೈನ್ ಮಾಡುವುದಕ್ಕೆ ಸೂಚಿಸಲಾಗಿದೆ ಎಂದು ಎಂದು ಪಾಲಿಕೆ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ತಿಳಿಸಿದ್ದಾರೆ.
ಈಗಾಗಲೇ ಪಾದರಾಯನಪುರ ಹಾಗೂ ಬಾಪೂಜಿನಗರ ವಾರ್ಡ್‌ಗಳಲ್ಲಿ ಸೀಲ್‌ಡೌನ್ ಮಾಡಲಾಗಿದೆ. ಇಲ್ಲಿನ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ. ಬಡವರಿಗೆ ಬಿಬಿಎಂಪಿಯಿಂದ ದಿನಸಿ ಕಿಟ್ ವಿತರಣೆ ಮಾಡಲಾಗುತ್ತಿದ್ದು, ತರಕಾರಿ, ಹಣ್ಣು, ಔಷಧಿ ಖರೀದಿಗೂ ಕ್ರಮ ವಹಿಸಲಾಗಿದೆ.
ಟಿಪ್ಪು ನಗರ ಸೇರಿ, ನಗರದ ಇತರೆ ಪ್ರದೇಶಗಳಲ್ಲಿ ಸ್ಥಳೀಯ ನಿವಾಸಿಗಳು ಪ್ರೇರಿತವಾಗಿ ರಸ್ತೆಗಳನ್ನು ಬಂದ್ ಮಾಡಿಕೊಂಡು ಪರಿಣಾಮಕಾರಿಯಾಗಿ ಲಾಕ್‌ಡೌನ್ ಪಾಲನೆ ಮಾಡುತ್ತಿದ್ದಾರೆ. ಹೀಗಾಗಿ ಬೇರೆ ಪ್ರದೇಶಗಳಲ್ಲಿ ಸೀಲ್‌ಡೌನ್ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.
ಮಾಸ್ಕ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಕೊಡ್ತಾರಂತೆ!: ಯಾವ ಏರಿಯಾದ ಬಂಕ್‌ಗಳಲ್ಲಿ? ಇಲ್ಲಿದೆ ನೋಡಿ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
