ಸಹಕಾರಇಲಾಖೆ ಮತ್ತು ತೋಟಗಾರಿಕೆ ಸಚಿವರು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರ ಎದುರೇ ಮಾತಿನ ಚಕಮಕಿ ನಡೆಸಿದ ಪ್ರಸಂಗ ನಡೆಯಿತು.
ಆಹಾರ ಸರಬರಾಜು ಸರಪಳಿಯಲ್ಲಿ ಜವಾಬ್ದಾರಿ ಹೊಂದಿರುವ ಕೃಷಿ, ತೋಟಗಾರಿಕೆ, ಸಹಕಾರ, ಆಹಾರ ಇಲಾಖೆಯೊಂದಿಗೆ ನಡೆಸಿದ ಸಭೆಯಲ್ಲಿ ಈ ಘಟನೆ ನಡೆಯಿತು.
ತೋಟಗಾರಿಕೆ ಉತ್ಪನ್ನಗಳು ಮತ್ತು ಸರಬರಾಜು ಕುರಿತು ಸೋಮಶೇಖರ್ ಸಲಹೆ ನೀಡಿದ್ದು ಆ ಇಲಾಖೆ ಸಚಿವ ನಾರಾಯಣಗೌಡರಿಗೆ ಸಹ್ಯ ಎನಿಸಿಲ್ಲ. ಇದರಿಂದ ಮಾತಿಗೆ ಮಾತು ಬೆಳೆದಿದೆ. ಏರು ಧ್ವನಿಯಲ್ಲಿ ಇಬ್ಬರೂ ಏಕವಚನದಲ್ಲಿ ಮಾತನಾಡಿಕೊಳ್ಳಲಾರಂಭಿಸಿದಾಗ ಅಲ್ಲಿದ್ದ ಸಿಬ್ಬಂದಿ ಸಭೆ ನಡೆಯುತ್ತಿದ್ದ ಬಾಗಿಲು ಮುಚ್ಚಿದರು.
ನನ್ನ ಇಲಾಖೆಯಲ್ಲಿ ನೀನು ಹಸ್ತಕ್ಷೇಪ ಮಾಡಬೇಡವೆಂದು ನಾರಾಯಣಗೌಡ ಎಚ್ಚರಿಕೆ ನೀಡಿದಾಗ, ನಾನು ಸಹಕಾರ ಸಚಿವ, ನನಗೆ ಕೃಷಿ ಉತ್ಪನ್ನಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿದೆ ಎಂದರು. ಇದೆಲ್ಲವನ್ನೂ ಡಿಸಿಎಂ ನೋಡುತ್ತಾ ಕುಳಿತಿದ್ದರು. ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಸೋಮಶೇಖರ್, ಇದೆಲ್ಲಾ ಸಣ್ಣ ಪುಟ್ಟ ವಿಚಾರ ಎಂದು ಸ್ಪಷ್ಟನೆ ನೀಡಿದರು.
VIDEO| ತಂದೆಗೆ ಅನಾರೋಗ್ಯವೆಂದು ಕಣ್ಣೀರಿಟ್ಟು ಬೇಡಿಕೊಂಡ್ರು ಬಿಡಲಿಲ್ಲ​: ಹೊತ್ತುಕೊಂಡೇ ಆಸ್ಪತ್ರೆಗೆ ಸಾಗಿದ ಮಗನ ಹಿಂದೆ ಓಡಿಬಂದ ತಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
