ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರಿಗೆ ಕರೊನಾ ವೈರಸ್​ ನಿಯಂತ್ರಣದ ಸಂಪೂರ್ಣ ಜವಾಬ್ದಾರಿಯನ್ನು ನೀಡಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ತೀವ್ರವಾಗಿ ಹರಡುತ್ತಿರುವ ಸೋಂಕು ನಿಯಂತ್ರಿಸಲು ಆರೋಗ್ಯ ಸಚಿವ ಶ್ರೀರಾಮುಲು ವಿಫಲವಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿದ್ದ ವೈರಸ್​ ನಿಯಂತ್ರಣದ ಜವಾಬ್ದಾರಿಯನ್ನು ಡಾ.ಸುಧಾಕರ್​ಗೆ ವಹಿಸಿದ್ದಾರೆ.
ವೈದ್ಯರು ಆಗಿರುವ ಡಾ. ಸುಧಾಕರ್​ ವೈರಾಣು ಬಗ್ಗೆ ಜ್ಞಾನ ಹೊಂದಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಹೆಚ್ಚಿನ ಜವಾಬ್ದಾರಿ ವಹಿಸಿದ್ದಾರೆ. ವೈರಸ್​ ಸೋಂಕು ತಡೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳು, ಸೋಂಕು ಹರಡುವಿಕೆ ಸೇರಿದಂತೆ ಎಲ್ಲ ಮಾಹಿತಿಗಳನ್ನು ಇನ್ನು ಮುಂದೆ ಡಾ. ಸುಧಾಕರ್​ ನೀಡಲಿದ್ದಾರೆ.
ರಾಜ್ಯದಲ್ಲಿ ಸೋಂಕು ಪತ್ತೆಯಾಗುತ್ತಿದ್ದಂತೆ ಡಾ.ಸುಧಾಕರ್​ ಹೆಚ್ಚು ಆಸಕ್ತಿ ವಹಿಸಿ ಕರೊನಾ ವೈರಸ್​ ತಡೆಯುವ ಬಗ್ಗೆ ಸಲಹೆ ನೀಡುತ್ತಿದ್ದರು. ಸಚಿವರ ವ್ಯಾಪ್ತಿಗೆ ಬರದಿದ್ದರೂ ಅವರು ಶ್ರಮ ವಹಿಸುತ್ತಿದ್ದರು. (ದಿಗ್ವಿಜಯ ನ್ಯೂಸ್​)
ಕರೊನಾಗೆ ಸೆಡ್ಡುಹೊಡೆದು ಸತತ ಹೋರಾಡಿದ್ದ ಚೀನಾ ವೈದ್ಯ ಸಾವು: ಇನ್ನೊಂದು ವಾರದಲ್ಲಿ ಬರ್ತ್​ಡೇ ಇತ್ತು, ತಂದೆಯೂ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
