|ರಾಯಣ್ಣ ಆರ್.ಸಿ.
ಬೆಳಗಾವಿ:ವಾಯವ್ಯ ಪದವೀಧರ ವಿಧಾನ ಪರಿಷತ್ ಕ್ಷೇತ್ರ ಹಾಗೂ ವಾಯವ್ಯ ಶಿಕ್ಷಕ ಮತಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೂರು ಜಿಲ್ಲೆಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
2 ಸ್ಥಾನಗಳಿಗೆ ನಡೆಯಲಿರುವ ಈ ಪರಿಷತ್ ಚುನಾವಣೆ ಟಿಕೆಟ್‌ ಅನ್ನು ಭಾರತೀಯ ಜನತಾ ಪಕ್ಷ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಅಭ್ಯರ್ಥಿಗಳಿಗೆ ನೀಡಿದರೇ, ಕಾಂಗ್ರೆಸ್ ಪಕ್ಷವೂ ಬೆಳಗಾವಿ ಜಿಲ್ಲೆಯ ಎರಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.
ಅಥಣಿಯ ನ್ಯಾಯವಾದಿ ಸುನೀಲ ಅಣ್ಣಪ್ಪ ಸಂಕ ಅವರಿಗೆ ಟಿಕೆಟ್ ನೀಡಲಾಗಿದ್ದು, ವಾಯವ್ಯ ಶಿಕ್ಷಕ ಮತಕ್ಷೇತ್ರದ ಟಿಕೆಟ್‌ನ್ನು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಅವರಿಗೆ ಘೋಷಣೆ ಮಾಡಿದೆ.ಕಳೆದ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಮಹಾಂತೇಶ ಕವಟಗಿಮಠ ಅವರು ಸೋಲು ಅನುಭವಿಸಿದ್ದನ್ನು ಬಿಜೆಪಿ ಈಗ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರೂ, ಹಾಲಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಅವರ ವಿರುದ್ಧ ಕಾಂಗ್ರೆಸ್‌ನಿಂದ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಅವರನ್ನು ಪ್ರಬಲ ಎದುರಾಳಿಯನ್ನಾಗಿ ಕಣಕ್ಕಿಳಿಸಿರುವುದರಿಂದ ಚುನಾವಣೆ ಕಣ ರಂಗೇರಲಿದೆ.
ಪ್ರಕಾಶ್ ಹುಕ್ಕೇರಿ ಅವರ ಬೆಂಬಲಿಗರ ತಂಡಗಳು, ಕಳೆದ 2-3 ತಿಂಗಳುಗಳಿಂದ ಬೆಳಗಾವಿ, ವಿಜಯಪುರ ಹಾಗೂ ಬಾಗಕೋಟೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಬಿಜೆಪಿಯಿಂದ ವಾಯವ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿರುವ ವಿಧಾನ ಪರಿಷತ್ತಿನ ಸದಸ್ಯ ಹಣಮಂತ ನಿರಾಣಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪ್ತರಾಗಿರುವ ಅಥಣಿ ನ್ಯಾಯವಾದಿ ಸುನೀಲ ಸಂಕ ಕಾಂಗ್ರೆಸ್ ಅಭ್ಯರ್ಥಿಯಾಗಿರುವುದರಿಂದ ಇವರಿಬ್ಬರ ಮಧ್ಯೆ ನೇರ ಸ್ಪರ್ಧೆ ನಡೆಯಲಿದೆ.
ಬಿಜೆಪಿಯಿಂದ ಕಳೆದ ಬಾರಿ ಗೆದ್ದು ಬಂದಿದ್ದ ಅರುಣ ಶಹಾಪುರ ಮತ್ತು ಹಣಮಂತ ನಿರಾಣಿ ಅವರ ಅಧಿಕಾರ ಅವಧಿ ಮುಂಬರುವ 4 ಜುಲೈ 2022ಕ್ಕೆ ಮುಕ್ತಾಯಗೊಳ್ಳಲಿದೆ. ಹಾಗಾಗಿ ಮೇ 3ನೇ ವಾರದಲ್ಲಿ ವಿಧಾನ ಪರಿಷತ್‌ ಚುನಾವಣೆ ಘೋಷಣೆಯಾಗುವ ನಿರೀಕ್ಷೆ ಇದೆ.
ವಾಯವ್ಯ ಶಿಕ್ಷಕರ ಕ್ಷೇತ್ರಬೆಳಗಾವಿ -9355ಬಾಗಲಕೋಟ -4638ವಿಜಯಪುರ -5512ಒಟ್ಟು= 19505
ಪದವೀಧರ ಕ್ಷೇತ್ರಬೆಳಗಾವಿ -31489ಬಾಗಲಕೋಟ -26342ವಿಜಯಪುರ -14846ಒಟ್ಟು= 72674
—–ಮೂರೂ ಜಿಲ್ಲೆಗಳು ಸೇರಿ ಮತಗಟ್ಟೆಗಳ ಸಂಖ್ಯೆ-151
ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ಕೇಸ್​: ಮತ್ತಿಬ್ಬರು ಪೊಲೀಸರ ಬಂಧನ, ಇಂಜಿನಿಯರ್ ಮನೆ ಮೇಲೆ ದಾಳಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − seven =
Remember me
