ಬೆಂಗಳೂರು:ಬೆಂಗಳೂರು ನಗರ ಜಿಲ್ಲೆಯಲ್ಲಿರುವ 28 ಪಶುವೈದ್ಯಕೀಯ ಕೇಂದ್ರಗಳ ಸ್ಥಳಾಂತರ ವಿಚಾರದಲ್ಲಿ ಮಧ್ಯ ಪ್ರವೇಶಿಸಿರುವ ಹೈಕೋರ್ಟ್, ಮೊದಲಿದ್ದ ಜಾಗದಲ್ಲೇ ಪಶುವೈದ್ಯಕೀಯ ಕೇಂದ್ರಗಳು ಕಾರ್ಯನಿರ್ವಹಿಸಬೇಕು ಹಾಗೂ ಕೇಂದ್ರಗಳಿಗೆ ವೈದ್ಯರು, ಸಿಬ್ಬಂದಿಯನ್ನು ಮರುನಿಯೋಜನೆ ಮಾಡಬೇಕು ಎಂದು ನಿರ್ದೇಶಿಸಿದೆ.
ಪಶುವೈದ್ಯ ಕೇಂದ್ರಗಳನ್ನು ಬೇರೆಡೆ ಸ್ಥಳಾಂತರಿಸಲು ಮುಂದಾಗಿದ್ದ ಸರ್ಕಾರ ಮತ್ತು ಬಿಬಿಎಂಪಿ ಕ್ರಮವನ್ನು ಪ್ರಶ್ನಿಸಿ ಅನಿಮಲ್ ರೈಟ್ಸ್ ಫಂಡ್ ಹಾಗೂ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ ಪಿಐಎಲ್‌ಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್ ನೇತೃತ್ವದ ವಿಭಾಗೀಯ ಪೀಠವು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಈ ನಿರ್ದೇಶನ ನೀಡಿದೆ.
ನಗರದಲ್ಲಿ ಪ್ರತಿನಿತ್ಯ 600-700 ಸಾಕು ಪ್ರಾಣಿಗಳು ಅನಾರೋಗ್ಯಕ್ಕೆ ತುತ್ತಾಗುತ್ತವೆ. ಅವುಗಳಿಗೆ ಅಗತ್ಯ ಚಿಕಿತ್ಸೆ ನೀಡಬೇಕು. ಹೀಗಿರುವಾಗ ಪಶುವೈದ್ಯಕೀಯ ಆಸ್ಪತ್ರೆಗಳ ಸ್ಥಳಾಂತರಕ್ಕೆ ಮುಂದಾಗಿರುವ ನಿರ್ಧಾರದಿಂದ ಸ್ಥಳೀಯ ರೈತರು ತಮ್ಮ ಪಶುಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಬೇಕಾಗುತ್ತದೆ. ಇದು ಸಾಮಾನ್ಯ ರೈತರನ್ನು ಸಂಕಷ್ಟಕ್ಕೆ ದೂಡುತ್ತದೆ ಎಂದು ಅರ್ಜಿದಾರರ ಪರ ವಕೀಲರು ಮಂಡಿಸಿದ ವಾದವನ್ನು ಪರಿಗಣಿಸಿದ ನ್ಯಾಯಪೀಠ ಈ ಆದೇಶ ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
