ಬೆಂಗಳೂರು :ರಾಜ್ಯಪಾಲರು ಅಂಕಿತ ಹಾಕುತ್ತಿದ್ದಂತೆ ರಾಜ್ಯದಲ್ಲಿ ಗೋಹತ್ಯೆ ತಡೆಯಲು ರೂಪಿಸಿರುವ ಸುಗ್ರೀವಾಜ್ಞೆ ಜಾರಿಗೆ ಸರ್ಕಾರ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಸುಗ್ರೀವಾಜ್ಞೆ ಜಾರಿ ಬಳಿಕ ಸಾಕಲಾಗದ ಹಾಗೂ ವಯಸ್ಸಾದ ಹಸುಗಳನ್ನು ಹತ್ತಿರದ ಗೋಶಾಲೆಗೆ ನೀಡುವಂತೆ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ರಾಜ್ಯದ ರೈತರಲ್ಲಿ ಮನವಿ ಮಾಡಿದ್ದಾರೆ
ಗೋಶಾಲೆಗಳ ಸಾಮರ್ಥ್ಯ ಹೆಚ್ಚಳ :ರಾಜ್ಯದಲ್ಲಿ 159 ಗೋಶಾಲೆಗಳಿದ್ದು ಅವುಗಳಲ್ಲಿ 75ಕ್ಕೂ ಹೆಚ್ಚು ಗೋಶಾಲೆಗಳಿಗೆ ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಈಗಿರುವ ಎಲ್ಲ ಗೋಶಾಲೆಗಳಲ್ಲಿ ಗೋವುಗಳ ಸಾಕಣೆಯ ಸಾಮರ್ಥ್ಯ ಹೆಚ್ಚಿಸಲು ನಿರ್ಧರಿಸಲಾಗಿದೆ. ಗೋವು ಸಾಕಲು ಆಗದವರು ಜಾನುವಾರುಗಳನ್ನು ಗೋಶಾಲೆಗಳಿಗೆ ಬಿಡಲು ಮುಂದಾದರೆ ಯಾವುದೇ ಕಾರಣಕ್ಕೂ ನಿರಾಕರಿಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. ಹೊಸದಾಗಿ ಗೋಶಾಲೆ ಆರಂಭಿಸುವವರಿಗೆ ಇಲಾಖೆ ಹಾಗೂ ಸರ್ಕಾರದ ಕಡೆಯಿಂದ ಪೋ›ತ್ಸಾಹ ನೀಡುತ್ತೇವೆ ಎಂದು ಚವ್ಹಾಣ್ ತಿಳಿಸಿದ್ದಾರೆ.
ಇದನ್ನೂ ಓದಿ:Web Exclusive | ರಾಜ್ಯದ 5 ಲ್ಯಾಬ್​ಗೆ ಡೆಡ್​ಲೈನ್; ಆಹಾರ ಪರೀಕ್ಷಾ ಪ್ರಯೋಗಾಲಯ ಸ್ಥಗಿತಕ್ಕೆ ಎಫ್​ಎಸ್​ಎಸ್​ಎ ನಿರ್ದೇಶನ
ಸಾರ್ವಜನಿಕರಿಗೆ ಮನವಿ
ಗೋವುಗಳ ಸಂರಕ್ಷಣೆ ಕೇವಲ ಸರ್ಕಾರದ ಹೊಣೆ ಅಂತ ತಿಳಿಯದೇ ಸಾರ್ವಜನಿಕರು ಈ ಕಾರ್ಯದಲ್ಲಿ ಕೈ ಜೋಡಿಸಬಹುದು ಎಂದು ಮನವಿ ಮಾಡಿದ್ದಾರೆ.
ಅಧಿಕಾರಿಗಳಿಗೆ ಎಚ್ಚರಿಕೆರಾಜ್ಯದಲ್ಲಿ ಬೀಡಾಡಿ ದನಗಳ ನಿರ್ವಹಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಹತ್ತಿರದ ಗೋಶಾಲೆಗಳಿಗೆ ದನಗಳನ್ನು ಸೇರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಪ್ರತಿ ಜಿಲ್ಲೆ ವ್ಯಾಪ್ತಿಯಲ್ಲಿ ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕರು ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಅವರೊಂದಿಗೆ ರ್ಚಚಿಸಿ ಸ್ಥಳೀಯವಾಗಿ ಹೊಸ ಗೋಶಾಲೆ ತೆರೆಯಲು ಕ್ರಮ ಕೈಗೊಳ್ಳಬೇಕು. ಅಲ್ಲಿ ಮೇವು, ನೀರು, ಚಿಕಿತ್ಸೆ ಹಾಗೂ ಬೀಡಾಡಿ ದನಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ್ದಾರೆ. ರಸ್ತೆಯಲ್ಲಿ ಬೀಡಾಡಿ ಜಾನುವಾರು ಕಂಡುಬಂದಲ್ಲಿ ಕ್ರಮ ವಹಿಸದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ವಹಿಸಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ.
ಇದನ್ನೂ ಓದಿ:ಹುಲಿ ಸಂರಕ್ಷಿತ ಉದ್ಯಾನವನಗಳಿನ್ನು ಹೈಟೆಕ್ – ಸಚಿವ ಆನಂದ್ ಸಿಂಗ್
ಇಲಾಖೆಯ ಹದ್ದಿನ ಕಣ್ಣುರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯರೊಂದಿಗೆ ಸಹ ಸುದೀರ್ಘವಾಗಿ ಚರ್ಚೆ ಮಾಡಲಾಗಿದ್ದು ರಾಜ್ಯದೆಲ್ಲೆಡೆ ಅಕ್ರಮವಾಗಿ ನಡೆಯುವ ಗೋವುಗಳ ಸಾಗಾಟ, ವಧೆಯ ಬಗ್ಗೆ ನಿಗಾವಹಿಸಿ ಪಶುಸಂಗೋಪನೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಎಲ್ಲೆಡೆ ಹದ್ದಿನ ಕಣ್ಣಿಡಲು ತಿಳಿಸಲಾಗಿದೆ. ಕೃಷಿ ಹಾಗೂ ಪಶುಸಂಗೋಪನೆ ಚಟುವಟಿಕೆಗಳಿಗಾಗಿ ಸಾಗಾಣಿಕೆ ಮಾಡುವವರಿಗೆ ನೀಡಬೇಕಾದ ಅನುಮತಿ ಪತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಸುಗ್ರೀವಾಜ್ಞೆ ತರುವುದಾಗಿ ಸರ್ಕಾರ ತೀರ್ಮಾನ ಕೈಗೊಂಡ ಕೂಡಲೇ ವಿರೋಧ ಮಾಡುವುದು ವಿಪಕ್ಷ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಕರೊನಾ ದಾಖಲೆಯ ಇಳಿಕೆ; ದೇಶದಲ್ಲಿ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ವೈರಸ್
ಆಹಾರದ ಹಕ್ಕು ಕಸಿಯುತ್ತಿಲ್ಲಮಾಂಸ ತಿನ್ನುವವರ ಹಕ್ಕನ್ನು ಈ ಕಾಯ್ದೆಯ ಮೂಲಕ ಮೊಟಕು ಗೊಳಿಸುತ್ತಿಲ್ಲ. ಈ ಮಸೂದೆಯಲ್ಲೇ ತಿಳಿಸಿದಂತೆ 13 ವರ್ಷಕ್ಕಿಂತ ಮೇಲ್ಪಟ್ಟ ಎಮ್ಮೆ ಮತ್ತು ಕೋಣಗಳನ್ನು ಕೈಬಿಡಲಾಗಿದೆ. ಆಹಾರದ ಹಕ್ಕನ್ನು ಈ ಕಾಯ್ದೆ ಕಸಿಯುತ್ತಿದೆ ಎಂಬ ಹೇಳಿಕೆಗಳು ನಿರಾಧಾರ. 2010ರಲ್ಲಿ ಇದೇ ಮಸೂದೆಯನ್ನು ಮಂಡಿಸಿದಾಗ ಎಮ್ಮೆ ಮತ್ತು ಕೋಣಗಳನ್ನು ಕೈಬಿಟ್ಟರೆ ಅಂಗೀಕರಿಸಬಹುದು ಎಂದು ಕಾಂಗ್ರೆಸ್ ಅಭಿಪ್ರಾಯ ವ್ಯಕ್ತಪಡಿಸಿತ್ತು. ಇದೇ ಅಂಶಗಳು ಈಗಿನ ಮಸೂದೆಯಲ್ಲಿ ಪರಿಗಣನೆಗೆ ತೆಗೆದುಕೊಂಡರು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ನೋಡಿದರೆ ಕಾಂಗ್ರೆಸ್​ನ ಇಬ್ಬಗೆ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದು ಸಚಿವ ಪ್ರಭು ಚವ್ಹಾಣ್ ಅವರು ಟೀಕಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಎಸ್ಟಿಗೆ ಸೇರಿಸಲು ಗೋಂಧಳಿ ಸಮುದಾಯ ಮೊರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
