ದಾವಣಗೆರೆ:ರಸ್ತೆಬದಿಯಲ್ಲೇ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಜಗಳೂರು ತಾಲೂಕಿನ ಅಶ್ವತ್ಥರೆಡ್ಡಿ ನಗರ ಸಮೀಪದ ಬಿದರಕೆರೆ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಎಗ್​ರೈಸ್ ವ್ಯಾಪಾರಿ ಬಸವರಾಜ(45) ಭೀಕರವಾಗಿ ಕೊಲೆಯಾದವ. ಗೋಪಗೊಂಡನಹಳ್ಳಿ ಸಮೀಪದಲ್ಲಿರುವ ಹೊಲಕ್ಕೆಂದು ಬುಧವಾರ ಬೆಳಗಿನ ಜಾವ ಬಸವರಾಜ ಹೋಗುತ್ತಿದ್ದ ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಶವ ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ವಾಯುವಿಹಾರಕ್ಕೆ ಹೋದ ಸಾರ್ವಜನಿಕರು ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸಿಪಿಐ ದುರ್ಗಪ್ಪ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಶವದ ಪಕ್ಕದಲ್ಲಿ ವಾಹನ ಚಾಲಕರು ಧರಿಸುವ ಖಾಕಿ ಮೇಲಂಗಿ ಪತ್ತೆಯಾಗಿದೆ. ಕೊಲೆಗೆ ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ.
ಪಿಪಿಇ ಕಿಟ್​ ಧರಿಸಿ ಬಂದ ಗೆಳೆಯನೊಂದಿಗೆ ಟೆಕ್ಕಿ ಪತ್ನಿ ಎಸ್ಕೇಪ್​! ಬೆಚ್ಚಿ ಬೀಳ್ತೀರಿ ಆಕೆಯ ಮಾಸ್ಟರ್​ ಪ್ಲ್ಯಾನ್​ ಕೇಳಿದ್ರೆ…

ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು, ತಲೆ-ದೇಹ ಇಬ್ಭಾಗ!

ಬೆಳ್ಳಂಬೆಳಗ್ಗೆ ಪತ್ನಿ ಕಣ್ಣೆದುರಲ್ಲೇ ಗಂಡ-ಅತ್ತೆಯ ಬರ್ಬರ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
