ಬಾಗಲಕೋಟೆ:ಬಕ್ರೀದ್ ಹಬ್ಬದಂದೇ ಬಾದಾಮಿ ಪಟ್ಟಣದ ಹೊರ ವಲಯದಲ್ಲಿ ಗೋವುಗಳು ಹತ್ಯೆಗೀಡಾಗಿರುವ ಘಟನೆ ನಡೆದಿದೆ. ಖಾಜಿ ಎಂಬುವರ ಹೊಲದಲ್ಲಿ ಗೋವುಗಳನ್ನು ಕೊಂದು ನೇತು ಹಾಕಿರುವ ದೃಶ್ಯ ಕಂಡು ಬಂದಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಈ ವೇಳೆ ಚೀಲದಲ್ಲಿ ಗೋಮಾಂಸ ತುಂಬಿರುವುದು ಹಾಗೂ ಗೋವುಗಳನ್ನು ಕಡಿದು ನೇತು ಹಾಕಿರುವುದು ಬೆಳಕಿಗೆ ಬಂದಿದೆ.
ಶ್ರೀರಾಮಸೇನೆ ಕಾರ್ಯಕರ್ತರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಗೋ ಹಂತಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದೀಗ ಬಾದಾಮಿ ಪಟ್ಟಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿವಿಧ ಹಿಂದು ಸಂಘಟನೆ ಕಾರ್ಯಕರ್ತರು ಒಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ರಾಮದುರ್ಗ ಸರ್ಕಲ್​ನಿಂದ ಬಸವೇಶ್ವರ ಸರ್ಕಲ್​ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಇದನ್ನೂ ಓದಿ:ಅತ್ಯಂತ ಉದ್ದದ ನಾಲಿಗೆ ಹೊಂದಿರುವ ‘ರಾಕಿ’ ಹೆಸರು ಗಿನ್ನೆಸ್ ದಾಖಲೆಗೆ ಸೇರ್ಪಡೆ!
ಪ್ರತಿಭಟನೆ ನಡೆಸುತ್ತಾ ಹಿಂದು ಕಾರ್ಯಕರ್ತರು ‘ಜೈ ಶಿವಾಜಿ, ಜೈ ಭವಾನಿ’ ಎಂದು ಘೋಷಣೆ ಕೂಗಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಎಸ್​ಪಿ ಜಯಪ್ರಕಾಶ್ ಭೇಟಿ ನೀಡಿ, ಪ್ರತಿಭಟನಾಕಾರರ ಜತೆ ಚರ್ಚೆ ನಡೆಸಿದ್ದಾರೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಗೋ ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಹನಗಂಡಿ ಗ್ರಾಮದಲ್ಲೂ ಗೋ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ತೇರದಾಳ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಒಂದು ಗೋವನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದ್ದು, ಎರಡು ಗೋವುಗಳನ್ನು ರಕ್ಷಣೆ ಮಾಡಲಾಗಿದೆ.
ಆರೋಪಿಗಳು ಮೂರು ಗೋವುಗಳನ್ನು ಹತ್ಯೆ ಮಾಡಲು ಮುಂದಾಗಿದ್ದರು. ಈ ವೇಳೆ ಪೊಲೀಸರು ದಾಳಿ ನಡೆಸಿ ಎರಡು ಗೋವುಗಳನ್ನು ರಕ್ಷಣೆ ಮಾಡಿದ್ದು, ಬಳಿಕ ಅವುಗಳನ್ನು ಗೋಶಾಲೆಗೆ ಬಿಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 3 =
Remember me
