ರಾಯಚೂರು: ಕೃಷ್ಣಾ ನದಿಯ ತಟದಲ್ಲಿನ ಗ್ರಾಮವೊಂದರಲ್ಲಿ ಮೊಸಳೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಸೃಷ್ಠಿಸಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ.
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನರಕಲದಿನ್ನಿ ಗ್ರಾಮದಲ್ಲಿ ಬೃಹತ್ ಆಕಾರದ ಮೊಸಳೆ ಪತ್ಯಕ್ಷವಾಗಿದ್ದು, ತಡ ರಾತ್ರಿ ಗ್ರಾಮದೊಳಗೆ ಮೊಸಳೆ ನುಗ್ಗಿದ್ದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮ ಕೃಷ್ಣಾ ನದಿ ಹತ್ತಿರವಿರುವದುದರಿಂದ ಮೊಸಳೆ ಗ್ರಾಮದೊಳಗೆ ನುಗ್ಗಿದೆ.
ಇದುವರೆಗೆ ಮೊಸಳೆಯಿಂದ ಯಾರಿಗೆ ಯಾವುದೇ ಜೀವಕ್ಕೆ ತೊಂದರೆ ನೀಡಿಲ್ಲವಾದರೂ, ಬೃಹತ್ ಆಕಾರದಲ್ಲಿರುವ ಮೊಸಳೆ ಏನಾದರೂ ಮಾಡಬಹುದು ಎನ್ನುವ ಆತಂಕವಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮೊಸಳೆಯನ್ನ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದರು. ಇದಕ್ಕೆ ಪೂರಕವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಮೊಸಳೆಯನ್ನು ಹಿಡಿದರು. ದನದ ಕೊಟ್ಟಿಗೆ ಹೊಕ್ಕ ಮೊಸಳೆಯನ್ನು ಹಸು, ಕರುವನ್ನು ಕಟ್ಟಿಹಾಕಿಯೇ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಲೆಗೆ ಬೀಳಿಸಿ ಸುರಕ್ಷಿತ ಪ್ರದೇಶಕ್ಕೆ ರವಾನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 4 =
Remember me
