ತುಮಕೂರು:ಅದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ವಿವಿಧ ಇಲಾಖೆಯ ಹತ್ತು ಅಧಿಕಾರಿಗಳಿಗೆ ಸೇರಿದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರಿನಲ್ಲಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿಯಾಗಿದೆ.
ತುಮಕೂರು ಜಿಲ್ಲೆ ಮಧುಗಿರಿ ವಿಭಾಗದ ಕೆಆರ್​ಡಿಐಎಲ್​ ಜೆಇ ಹನುಮಂತರಾಯಪ್ಪ ಮನೆ ಹಾಗೂ ಕಚೇರಿ ಸೇರಿದಂತೆ ಒಟ್ಟು 6 ಕಡೆ ಲೋಕಾಯುಕ್ತ ದಾಳಿ ನಡೆದಿದ್ದು, ಈ ವೇಳೆ ಅಪಾರ ಪ್ರಮಾಣದ ಚರ ಹಾಗೂ ಸ್ಥಿರಾಸ್ತಿ ಪತ್ತೆಯಾಗಿದೆ. ತುಮಕೂರಿನ ಶಿರಾ ಗೇಟ್, ಮಧುಗಿರಿ ತಾಲೂಕಿನ ಮಿಡಿಗೇಶಿ, ತುಮಕೂರು ತಾಲ್ಲೂಕಿನ ಮಲ್ಲಸಂದ್ರ ಬಳಿಯಿರುವ ಫಾರ್ಮ್ ಹೌಸ್, ಗುಬ್ಬಿ ತಾಲೂಕಿನ ಬಡಕನಪಾಳ್ಯದಲ್ಲಿರುವ ಫಾರ್ಮ್ ಹೌಸ್, ಮಧುಗಿರಿ ಉಪವಿಭಾಗದ ಕೆಆರ್​ಐಡಿಎಲ್ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.
ಮಧುಗಿರಿ ತಾಲೂಕಿನ ಕೆ.ಕೃಷ್ಣಾಪುರ, ಗುಬ್ಬಿ ತಾಲೂಕಿನ ಬಡಕನಪಾಳ್ಯದಲ್ಲಿ ಒಟ್ಟು 8 ಎಕರೆ 15 ಗುಂಟೆ ಜಮೀನು, ಮಧುಗಿರಿ ನಗರದ ಲಿಂಗೇನಹಳ್ಳಿಯಲ್ಲಿ 2 ನಿವೇಶನ, ತುಮಕೂರು ನಗರದಲ್ಲಿ ಮೂರು ಅಂತಸ್ತಿನ ಮನೆ, 2 ಕಾರು, 2 ದ್ವಿಚಕ್ರ ವಾಹನ, ಚಿನ್ನಾಭರಣ ಬೆಳ್ಳಿ ವಸ್ತುಗಳು ದಾಳಿ ವೇಳೆ ಪತ್ತೆಯಾಗಿದೆ. 3 ಕೋಟಿ 69 ಲಕ್ಷದ 72 ಸಾವಿರದ 500 ರೂಪಾಯಿ ಮೌಲ್ಯದ ಚರ ಹಾಗೂ ಸ್ಥಿರಾಸ್ತಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಅಧಿಕಾರಿಗಳು ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 × 2 =
Remember me
