ಬೆಳಗಾವಿ:ಬೈಲಹೊಂಗಲ ತಾಲೂಕಿನ ಗದ್ದಿಕರವಿನಕೊಪ್ಪ ಗ್ರಾಮದ ಬಳಿ ದುಷ್ಕರ್ಮಿಗಳು ವಾಹನ ಅಡ್ಡಗಟ್ಟಿ ಪಿಸ್ತೂಲ್-ಚಾಕು ತೋರಿಸಿ 4.97 ಕೋಟಿ ರೂ. ದರೋಡೆ ಮಾಡಿಕೊಂಡು ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಲಕ್ಷ್ಮೀ ಗೋಲ್ಡ್ ಅಂಗಡಿ ವ್ಯಾಪಾರಿ ವಿಕಾಸ ವಿಲಾಸ ಕದಂ ಎಂಬುವವರ ಹಣ ಕಳೆದುಕೊಂಡಿರುವ ವ್ಯಕ್ತಿ. ಏ.8ರಂದು ಬಂಗಾರದ ಅಂಗಡಿಯಲ್ಲಿ ವ್ಯವಹಾರ ಮಾಡಿದ್ದ 4,97,30,000 ರೂ. ಹಣವನ್ನು ಕೊಲ್ಲಾಪುರದಿಂದ ಉಡುಪಿಗೆ ತೆಗೆದುಕೊಂಡು ಹೂಗುವ ಸಲುವಾಗಿ ರಟ್ಟಿನ ಬಾಕ್ಸ್ ನಲ್ಲಿ 27,30,000 ಮತ್ತು 5 ಗೋಣಿ ಚೀಲದಲ್ಲಿ 4,70,00,000 ಹಾಕಿ ಪ್ಯಾಕ್ ಮಾಡಿಕೊಂಡು ಬೊಲೆರೋ ಪಿಕಪ್ ಗೂಡ್ಸ್ ವಾಹನದಲ್ಲಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ಬೆಳಗಾವಿ ಮಾರ್ಗವಾಗಿ ಹಿರೇಬಾಗೇವಾಡಿ ಬಂದಿದ್ದಾರೆ.
ಅಲ್ಲಿಂದ ಹೆದ್ದಾರಿ ಬಿಟ್ಟು ಬೈಲಹೊಂಗಲ ರಸ್ತೆ ಮೂಲಕ ಹೋಗುತ್ತಿರುವ ಸಂದರ್ಭದಲ್ಲಿ ಹಿರೇಬಾಗೇವಾಡಿಯ ಹಳ್ಳಿ ಮನೆ ದಾಬಾ ಬಳಿ ಎರ್ಟಿಗಾ ಕಾರಿನಲ್ಲಿದ್ದ ಐವರು ದರೋಡೆಕೋರರು ವಾಹನ ನಿಲ್ಲಿಸುವಂತೆ ಕೇಳಿದ್ದಾರೆ. ಆದರೆ, ಹಣವಿದ್ದ ವಾಹನ ಚಾಲಕ ತಪ್ಪಿಸಿಕೊಂಡು ಗದ್ದಿಕರವಿನಕೊಪ್ಪ- ಎಂ.ಕೆ.ಹುಬ್ಬಳ್ಳಿ ರಸ್ತೆ ಮೂಲಕ ಹೋಗುತ್ತಿರುವ ಸಂದರ್ಭದಲ್ಲಿ ಬೆನ್ನತ್ತಿ ಬಂದ ದರೋಡೆಕೋರರು ವಾಹನ ಅಡ್ಡಗಟ್ಟಿ ನಿಲ್ಲಿಸಿದ್ದಾರೆ.
ಬಳಿಕ ಬೊಲೆರೋ ವಾಹನದಲ್ಲಿದ್ದ ಚಾಲಕ ಸಚಿನ ಭಾನುದಾಸ ಐಹೊಳೆ, ಮಹಾದೇವ ರಾಮಚಂದ್ರ ಬನಸೋಡೆ ಅವರನ್ನು ಹೊಡೆದು ಪಿಸ್ತೂಲ್-ಚಾಕು ತೋರಿಸಿ 4.97 ಕೋಟಿ ರೂ. ದರೋಡೆ ಮಾಡಿಕೊಂಡು ಹೋಗಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಬೈಲಹೊಂಗಲ ಠಾಣೆ ಪಿಐ ಯು.ಎಚ್.ಸಾತೇನಹಳ್ಳಿ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ವಾಹನದ ಪೆಟ್ರೋಲ್ ಟ್ಯಾಂಕ್ ಫುಲ್ ಮಾಡಿದ್ರೆ ಬ್ಲಾಸ್ಟ್​ ಆಗುತ್ತಾ?

5 ಮದ್ವೆ, 3 ಡೈವೋರ್ಸ್, ಸದ್ಯ ಇಬ್ರು ಹೆಂಡ್ತಿ; ಪತ್ನಿ ಬೇಗ ಮನೆಗೆ ಬರಲಿ ಎಂದೇ ಫ್ಲೈಓವರ್!; ಏನಿದು, ಯಾರ ಕಥೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
