ಬೆಂಗಳೂರು:ಕೇಡರ್ ಬೇಸ್ ಪಾರ್ಟಿ ಆಗಿದ್ದ ಬಿಜೆಪಿ ಮಾಸ್ ಪಾರ್ಟಿ ಆಗಿ ಬದಲಾಗಿದೆ. ಈ ವೇಳೆ ಪ್ರವಾಹದ ಜತೆಗೆ ಕಸ-ಕಡ್ಡಿಯಂತೆ ಅನೇಕರು ಹರಿದು ಬಂದಿರಬಹುದು. ಆದರೆ ಪಕ್ಷದ ನೀತಿ- ನಿಯತ್ತು ಎಂಬ ಡ್ಯಾಮ್ ಫಿಲ್ಟರ್ ಮಾಡುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ‌ ವ್ಯಾಖ್ಯಾನಿಸಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.
ರಾಜಕೀಯ ಕಾರಣಕ್ಕಾಗಿ 1990ರ ದಶಕದಲ್ಲಿ ನನ್ನ ಹೆಸರನ್ನು ಸಮಾಜಘಾತಕರ ಪಟ್ಟಿಗೆ ಸೇರಿಸಿ ಪೊಲೀಸ್ ಠಾಣೆಯಲ್ಲಿ ಫೋಟೋ ಅಂಟಿಸಿದ್ದರು. ರೌಡಿಶೀಟರ್ ಹೆಸರಿದ್ದವರೆಲ್ಲ ರೌಡಿಗಳು ಎನ್ನಲಾಗದು. ಸೈಲೆಂಟ್ ಸುನಿಲ್, ಬೆತ್ತನಗೆರೆ ಶಂಕರ್, ವಿಲ್ಸನ್ ಗಾರ್ಡನ್ ನಾಗಾ, ರವಿ ಹೆಸರುಗಳು ಗೊತ್ತಿಲ್ಲ, ಆ ಬಗ್ಗೆ ಮಾಹಿತಿಯೂ ಇಲ್ಲ.
ಪಕ್ಷದ ತಂತ್ರಗಾರಿಕೆ ಬದಲಾಗುತ್ತದೆಯೇ ಹೊರತು ನೀತಿ- ನಿಯತ್ತು ಬದಲಾಗದು. ರೌಡಿಗಳ ಸೇರ್ಪಡೆಗೆ ಅವಕಾಶವಿಲ್ಲ ಎಂಬ ಪಕ್ಷದ ರಾಜ್ಯಾಧ್ಯಕ್ಷರ ಹೇಳಿಕೆಯನ್ನೇ ಪುನರುಚ್ಚರಿಸಬಯಸುವೆ ಎಂದು ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + eight =
Remember me
