ಬೆಂಗಳೂರು:ರೌಡಿ ಶೀಟರ್​ಗಳು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ರಾಜ್ಯ ರಾಜಕಾರಣದಲ್ಲಿ ಸದ್ಯ ಕೇಳಿ ಬರುತ್ತಿದೆ, ಇದಕ್ಕೆ ಪೂರಕವಾಗಿ ಕೆಲವು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳು ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡು, ಬಿಜೆಪಿ ನಾಯಕರ ಜತೆಗೆ ವೇದಿಕೆ ಹಂಚಿಕೊಂಡಿದ್ದರು. ಇದು ವಿಪಕ್ಷಗಳ ಟೀಕೆಗೆ ಅವಕಾಶ ಮಾಡಿಕೊಟ್ಟಿತ್ತು. ಇದಾದ ಬೆನ್ನಲೇ ಮುಖ್ಯಮಂತ್ರಿಗಳಿಂದ ಹಿಡಿದು, ಬಿಜೆಪಿ ರಾಜ್ಯಾಧ್ಯಕರು, ಹಿರಿಯ ನಾಯಕರು ಈ ಆರೋಪವನ್ನು ಅಲ್ಲಗಳೆದಿದ್ದರು.
ಸದ್ಯ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬಿಜೆಪಿಗೆ ರೌಡಿ ಶೀಟರ್ ಸೇರ್ಪಡೆ ವಿಚಾರವಾಗಿ ಮಾತನಾಡುತ್ತಾ, ದೇವರಾಜ್ ಅರಸ್ ಮುಖ್ಯಮಂತ್ರಿಯಾಗಿದ್ದಾಗ ವಿಧಾನಸೌಧದ ಮೂರನೇ ಮಹಡಿಯಲ್ಲಿ ರೌಡಿಗಳನ್ನ ಕೂರಿಸಿಕೊಂಡು ಚರ್ಚೆ ಮಾಡ್ತಿದ್ರು. ಇನ್ನು ಡಿ.ಕೆ.ಶಿವಕುಮಾರ್ ಈ ಹಿಂದೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಆಗಬೇಕು ಅಂದ್ರೆ ಹತ್ತಾರು ಕೇಸ್ ಆಗಬೇಕು ಎಂದಿದ್ದರು. ಅದರಂತೆ ನಲಪಾಡ್‌ಗೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೊಡಲಾಗಿದೆ ಎಂದು ಹೇಳಿದರು.
ಪೊಲೀಸ್ ಸ್ಟೇಷನ್​ನಲ್ಲಿ 90ರ ದಶಕದಲ್ಲಿ ನನ್ನ ಫೋಟೋ ಕೂಡಾ ರೌಡಿ ಶೀಟರ್ ಲೀಸ್ಟ್​​​ನಲ್ಲಿತ್ತು. ನಾನು ಯಾರ ಮೇಲೂ ದಬ್ಬಾಳಿಕೆ ಮಾಡಿರಲಿಲ್ಲ. ಹೀಗಿದ್ದೂ ಕೇವಲ ರಾಜಕೀಯಕ್ಕಾಗಿ ನನ್ನನ್ನು ರೌಡಿ ಶೀಟರ್ ಹೆಸರಿಗೆ ಸೇರಿಸಲಾಗಿತ್ತು ಎಂದು ಸಿ.ಟಿ.ರವಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
