ಬೆಂಗಳೂರು:ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿ.ಟಿ.ರವಿ ಸಚಿವ ಸ್ಥಾನಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಇನ್ನೂ ಅಂಗೀಕಾರವಾಗಿಲ್ಲ.
ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ದಿನವೇ ಗಾಂಧೀ ಜಯಂತಿ ಮುಗಿದ ಬಳಿಕ ರಾಜೀನಾಮೆ ನೀಡುವುದಾಗಿ ಅವರು ಹೇಳಿದ್ದರು. ಶನಿವಾರ ಬೆಳಗ್ಗೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರವಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರಗತಿಯ ವರದಿ ಹಾಗೂ ಇನ್ನೂ ಬಾಕಿ ಉಳಿದಿರುವ ಕೆಲಸಗಳ ವಿವರಗಳನ್ನು ಒಳಗೊಂಡ ಪುಸ್ತಕದ ಜತೆಗೆ ರಾಜೀನಾಮೆ ಸಹ ಸಲ್ಲಿಸಿದರು.
ಆದರೆ ರಾಜೀನಾಮೆಯನ್ನು ಅಂಗೀಕರಿಸದ ಯಡಿಯೂರಪ್ಪ, ದಸರಾ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳು ಮುಗಿಯುವ ತನಕ ಮುಂದುವರಿಯುವಂತೆ ಸೂಚನೆ ನೀಡಿದರೆನ್ನಲಾಗಿದೆ. ಅ.5-6ರಂದು ದೆಹಲಿಯಲ್ಲಿ ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆ ನಡೆಯಲಿದೆ. ಸಭೆ ಮುಗಿದ ನಂತರ ವರಿಷ್ಠರಿಂದ ಬರುವ ಸೂಚನೆಯನ್ನಾಧರಿಸಿ ರವಿ ರಾಜೀನಾಮೆಯ ಅಂಗೀಕಾರದ ಬಗ್ಗೆ ಸಿಎಂ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − three =
Remember me
