ಬೆಂಗಳೂರು:ಭಾರತೀಯ ಜನತಾ ಪಾರ್ಟಿ(BJP) ತನ್ನ ಕೇಂದ್ರ ಸಂಘಟನೆಯಲ್ಲಿ ಬದಲಾವಣೆಯನ್ನು ತಂದಿದ್ದು, ರಾಷ್ಟ್ರೀಯ ಮಂಡಳಿಯನ್ನು ಪುನರ್​ರಚಿಸಿ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಾಜಿ ಸಚಿವ ಸಿ.ಟಿ. ರವಿಗೆ ಕೊಕ್​ ನೀಡಲಾಗಿದ್ದು, ತೆಲಂಗಾಣ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಬಂಡಿ ಸಂಜಯ್​ ರೆಡ್ಡಿ ಸೇರಿದಂತೆ 8 ಮಂದಿ ಹೊಸಬರನ್ನು ಆ ಸ್ಥಾನಕ್ಕೆ ನೇಮಿಸಲಾಗಿದೆ.
ಈ ಕುರಿತು ಟ್ವೀಟ್​ ಮಾಡಿರುವ ರವಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ಜವಾಬ್ದಾರಿ ನೀಡಿ ಅವಕಾಶ ಮಾಡಿಕೊಟ್ಟ ಸನ್ಮಾನ್ಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾರವರಿಗೆ ಧನ್ಯವಾದಗಳು ಎಂದಿದ್ದಾರೆ.
ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ@BJP4Indiaಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ಜವಾಬ್ದಾರಿ ನೀಡಿ ಅವಕಾಶ ಮಾಡಿಕೊಟ್ಟ ಸನ್ಮಾನ್ಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ@JPNaddaಜಿ ಅವರಿಗೆ ತುಂಬು ಹೃದಯದ ಧನ್ಯವಾದಗಳು.ಈ ಜವಾಬ್ದಾರಿ ನನಗೆ ಬಹಳಷ್ಟು ಅನುಭವ ಮತ್ತು ಬದುಕಿಗೆ ಹೊಸ ಆಯಾಮಗಳನ್ನು ನೀಡಿದೆ. ಬೂತ್ ಮಟ್ಟದ…https://t.co/J7anidni5w
ಇದನ್ನೂ ಓದಿ:ಸಹೋದರಿಯನ್ನು ಮುಂದಿಟ್ಟುಕೊಂಡು ಪತಿಯ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ ಪತ್ನಿಗೆ ಜೈಲು
ಈ ಜವಾಬ್ದಾರಿ ನನಗೆ ಬಹಳಷ್ಟು ಅನುಭವ ಮತ್ತು ಬದುಕಿಗೆ ಹೊಸ ಆಯಾಮಗಳನ್ನು ನೀಡಿದೆ. ಬೂತ್ ಮಟ್ಟದ ಕಾರ್ಯಕರ್ತನಿಂದ ಹಿಡಿದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದವರೆಗಿನ ನನ್ನ ಪಯಣದಲ್ಲಿ ನಿರಂತರವಾಗಿ ಕಾರ್ಯಕರ್ತನ ಭಾವದಲ್ಲಿ ಕೆಲಸ ಮಾಡಿದ್ದೇನೆ. ಇನ್ನು ಮುಂದೆಯೂ ಅದೇ ಭಾವದಿಂದ ಪಕ್ಷ ನೀಡಿದ ಜವಾಬ್ದಾರಿಯನ್ನು ಕಾಯಾ ವಾಚಾ ಮನಸಾ ಮಾಡುತ್ತೇನೆ ಎಂದು ಸಿ.ಟಿ. ರವಿ ಟ್ವೀಟ್​ ಮಾಡಿದ್ಧಾರೆ.
13 ಮಂದಿ ರಾಷ್ಟ್ರೀಯ ನಾಯಕರನ್ನು ಬಿಜೆಪಿ ಉಪಾಧ್ಯಕ್ಷರನ್ನು ನೇಮಿಸಲಾಗಿದ್ದು, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಲ್​. ಸಂತೋಷ್​ ಮುಂದುವರೆಯಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + ten =
Remember me
