ಕುಂದಾಪುರ:ಸೈಕಲಲ್ಲಿ ಪ್ರಯಾಣಿಸುತ್ತಿದ್ದ ಸವಾರನೊಬ್ಬ ಸೈಕಲ್ ಸಹಿತ ಬಸ್ ಮುಂದಿನ ಚಕ್ರಕ್ಕೆ ಸಿಲುಕಿ ಅಪಾಯದಿಂದ ಪಾರಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ನಡೆದಿದೆ.
ಬಸ್ ಏಕಾಏಕಿ ಎಡಮಗ್ಗಲಿಗೆ ತಿರುಗಿದ್ದರಿಂದ ರಸ್ತೆಯ ಅಂಚಿನಲ್ಲಿ ಸೈಕಲ್ ಚಲಾಯಿಸುತ್ತಿದ್ದ ವ್ಯಕ್ತಿಗೆ ಡಿಕ್ಕಿಯಾಗಿದೆ. ಈ ವೇಳೆ ಬಸ್ಸಿನ ಮುಂಭಾಗದ ಚಕ್ರದಡಿಗೆ ಸೈಕಲ್ ಸಿಲುಕಿದೆ. ಸೈಕಲ್ ಚಾಲಕನ ಮೇಲೆ ಟೈಯರ್ ಹರಿದು ಹೋಗುವ ಸಾಧ್ಯತೆ ಇತ್ತು. ಅದೃಷ್ಟವಶಾತ್​ ತಕ್ಷಣವೇ ಬ್ರೇಕ್ ಹಾಕಿದ ಪರಿಣಾಮ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ಸೈಕಲ್ ಮುರಿದು ಪುಡಿ ಪುಡಿಯಾಗಿದೆ. ತಕ್ಷಣವೇ ಸ್ಥಳದಲ್ಲಿದ್ದ ಸ್ಥಳೀಯರು ಬಂದು ಸೈಕಲ್ ಚಾಲಕನನ್ನು ಮೇಲಕ್ಕೆತ್ತಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್​​ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹೆಲ್ಮಟ್​ಗೆ ಅಳವಡಿಸಿದ ಕ್ಯಾಮೆರಾದಲ್ಲಿ, ಈ ಭೀಕರ ದೃಶ್ಯ ದಾಖಲಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉಡುಪಿ ಲೈವ್​ ಹೆಸರಿನ ಫೇಸ್​ಬುಕ್​ ಪೇಜ್​ನಲ್ಲಿ ವಿಡಿಯೋವನ್ನು ಅಪ್​ಲೋಡ್​ ಮಾಡಲಾಗಿದ್ದು, ಈವರೆಗೂ ಎಂಟು ಸಾವಿರಕ್ಕೂ ಅಧಿಕ ಮಂದಿ ವಿಡಿಯೋ ವೀಕ್ಷಣೆ ಮಾಡಿದ್ದಾರೆ.

ರಾಯಲ್​ ಎನ್​ಫೀಲ್ಡ್​ಗೆ ಪ್ರತಿನಿತ್ಯ ವಿಶೇಷ ಪೂಜೆ! ಬುಲೆಟ್​ ದೇವಸ್ಥಾನದ ಹಿಂದಿದೆ ಭಯಾನಕ ಕತೆ

ಕರ್ನಾಟಕದಲ್ಲಿ ಹಿಜಾಬ್​ ನಿಷೇಧ ತೆಗೆದುಹಾಕಲು ನಿರ್ಧಾರ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
