ಮಂಗಳೂರು:ಸರ್ಕಾರದ ವಿದ್ಯಾಗಮ ಯೋಜನೆಯ ಬಳಿಕ ಕರೊನಾ ಸೋಂಕಿಗೆ ಒಳಗಾಗಿದ್ದ ಮೂಡಬಿದ್ರೆಯ ಶಿಕ್ಷಕಿ ಪದ್ಮಾಕ್ಷಿ ಅವರು ಚಿಕಿತ್ಸೆ ಫಲಿಸದೇ ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪದ್ಮಾಕ್ಷಿ ಮೂಡಬಿದರೆಯ ಮಕ್ಕಿ ಜವಹಾರ್ ನೆಹರೂ ಹೈಸ್ಕೂಲ್​ನ ಶಿಕ್ಷಕಿ. ವಿದ್ಯಾಗಮ ಬಳಿಕ ಕರೊನಾ ಸೋಂಕು ತಗುಲಿತ್ತು. ಬಳಿಕ ಅವರನ್ನು ಮಂಗಳೂರಿನ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಾಕ್ಷಿಯನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ದುರಾದೃಷ್ಟಕರ ಪದ್ಮಾಕ್ಷಿ ಪತಿ, ಮೂಡಬಿದರೆಯ ಡಿ.ಜೆ. ಹೈಯರ್ ಪ್ರೈಮರಿ ‌ಶಾಲೆ ಮುಖ್ಯಶಿಕ್ಷಕ ಶಶಿಕಾಂತ್ ಅವರಿಗೂ ಕರೊನಾ ದೃಢಪಟ್ಟಿದೆ.
ವಿದ್ಯಾಗಮ’ದ ನಂತರವೇ ಅಮ್ಮನಿಗೆ ಈ ಸ್ಥಿತಿ ಬಂದಿದೆಈ ಹಿಂದೆಯೇ ಫೇಸ್​ಬುಕ್​ನಲ್ಲಿ ಅಳಲು ತೋಡಿಕೊಂಡಿದ್ದ ಶಿಕ್ಷಕ ದಂಪತಿ ಮಗಳು ಐಶ್ವರ್ಯಾ ಜೈನ್​, ಸದ್ಯ ಅಮ್ಮನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗೆ ಆರ್ಥಿಕ ನೆರವು ನೀಡಿ, ಆ ಮೂಲಕ ನನ್ನ ತಾಯಿಯನ್ನು ಉಳಿಸಿಕೊಡಿ ಎಂದು ಫೇಸ್​ಬುಕ್​ನಲ್ಲಿ ಫೋಟೋ ಸಹಿತ ಮನವಿ ಮಾಡಿದ್ದರು. ಅಷ್ಟೇ ಅಲ್ಲ, ವಿದ್ಯಾಗಮದ ಪರಿಣಾಮ ಅಮ್ಮನಿಗೆ ಈ ಸ್ಥಿತಿ ಬಂದಿದೆ ಎಂದೂ ಅಸಮಾಧಾನ ಹೊರಹಾಕಿದ್ದರು. ವಿದ್ಯಾಗಮಕ್ಕೂ ಮೊದಲು ಅಮ್ಮ ಆರಾಮಾಗಿದ್ದರು. ವಿದ್ಯಾಗಮದ ನಂತರವೇ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಪೋಸ್ಟ್ ಮಾಡಿದ್ದರು.
ಇದನ್ನೂ ಓದಿ:ಹೊಸ ವರ್ಷ ಆರಂಭವಾಗ್ತಾ ಇದ್ದಂಗೆ ಕಾಂಗ್ರೆಸ್ ಪಕ್ಷಕ್ಕೆ ಹೊಸ ಅಧ್ಯಕ್ಷರು* ಬರ್ತಾರಂತೆ!
ಈ ಕುರಿತು ಮಾಧ್ಯಮಗಳಲ್ಲಿ ವರದಿ ಬರುತ್ತಿದ್ದಂತೆ ಎಚ್ಚೆತ್ತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಕೂಡಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿ ಶಿಕ್ಷಕಿಗೆ ಉತ್ತಮ ಚಿಕಿತ್ಸೆ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು. ಗುಣಮಟ್ಟದ ಚಿಕಿತ್ಸೆಗೆ ವ್ಯವಸ್ಥೆ ಮತ್ತು ಆ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದರು. ಸರ್ಕಾರದ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಐಶ್ವರ್ಯಾಳನ್ನು ಸಂಪರ್ಕಿಸಿ, ತಾಯಿಯ ಚಿಕಿತ್ಸೆ ಕುರಿತು ಸರ್ಕಾರ ಪೂರ್ಣ ಕಾಳಜಿ ವಹಿಸಿದೆ. ಯಾವುದೇ ಆತಂಕ ಬೇಡ ಎಂದು ಸಾಂತ್ವಾನ ಹೇಳಿದ್ದರು.
ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಸದರಿ ಶಿಕ್ಷಕಿಯ ಚಿಕಿತ್ಸೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದರು.
ಆದರೆ, ಆರೋಗ್ಯ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದರಿಂದ ಏನೇ ಪ್ರಯತ್ನ ಮಾಡಿದರೂ ಶಿಕ್ಷಕಿಯನ್ನು ಉಳಿಸಿಕೊಳ್ಳಲು ಕೊನೆಗೂ ಸಾಧ್ಯವಾಗಲಿಲ್ಲ. ಇತ್ತ ಪದ್ಮಕ್ಷಿ ಪತಿಗೂ ಕರೊನಾ ಇರುವುದರಿಂದ ಮಗಳು ಐಶ್ವರ್ಯಾ ಮನದಲ್ಲಿ ಕಾರ್ಮೋಡ ಕವಿದಿದೆ. ಈಗಾಗಲೇ ಅಮ್ಮನನ್ನು ಕಳೆದುಕೊಂಡಿರುವ ಐಶ್ವರ್ಯಾಗೆ ಅಪ್ಪನೇ ಪ್ರಮುಖ ಆಧಾರ ಸ್ತಂಭವಾಗಿದ್ದಾರೆ. ಇದೀಗ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಪ್ಲೀಸ್​… ನನ್ನ ಅಮ್ಮನನ್ನು ಉಳಿಸಿಕೊಡಿ: ಮನಕಲಕುತ್ತೆ ಶಿಕ್ಷಕ ದಂಪತಿ ಮಗಳ ರೋದನ

ಪ್ಲೀಸ್​… ಅಮ್ಮನನ್ನು ಉಳಿಸಿಕೊಡಿ ಎಂದ ಟೀಚರ್​ ಮಗಳು: ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 9 =
Remember me
