ಬೆಂಗಳೂರು:ಸ್ಯಾಂಡಲ್​ವುಡ್​ ಸ್ಟಾರ್​ ನಟ ದರ್ಶನ್​ ಕೊಲೆ ಪ್ರಕರಣವೊಂದರಲ್ಲಿ ಇದೀಗ ಪೊಲೀಸರ ಅತಿಥಿಯಾಗಿದ್ದು, ನಟಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ ಕೊಲೆಯಲ್ಲಿ ದರ್ಶನ್​ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್​ರನ್ನು ಬಂಧಿಸಿದ್ದಾರೆ. ಇದಲ್ಲದೆ, ಒಳಸಂಚು ನಡೆಸಿದ ಆರೋಪದ ಮೇಲೆ ಪವಿತ್ರಾ ಗೌಡಳನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:ನಾನು ಮಾಡಿದ್ದು ತಪ್ಪು! ಹರ್ಭಜನ್​ ಸಿಂಗ್​ ಬಳಿ ಕ್ಷಮೆಯಾಚಿಸಿದ ಪಾಕ್​ ಮಾಜಿ ಆಟಗಾರ ಅಕ್ಮಲ್​
ಸದ್ಯ ಅನ್ನಪೂರ್ಣೆಶ್ವರಿ ನಗರ ಪೊಲೀಸ್​ ಠಾಣೆಯಲ್ಲಿರುವ ನಟ ದರ್ಶನ್​, ಅಧಿಕಾರಿಗಳಿಗೆ ಕೊಟ್ಟ ಮೊದಲ ಪ್ರತಿಕ್ರಿಯೆ ಹೀಗಿದೆ. ನಾನು ರೇಣುಕಾಸ್ವಾಮಿ ಕೊಲೆ ಮಾಡಲು ಹೇಳಿಲ್ಲ. ಕೇವಲ ಅವರನ್ನು ಬೆದರಿಸುವಂತೆ ಮಾತ್ರ ಹೇಳಿದ್ದೆ ಅಷ್ಟೇ ಎಂದು ಹೇಳಿದ್ದಾರೆ. ದರ್ಶನ್​ ಜತೆಗೆ ಅವರ ಪ್ರೇಯಸಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದಿರುವ ಪೊಲೀಸರು, ಆಕೆಯನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ಅಂತ್ಯದ ವೇಳೆಗೆ ಮತ್ತಷ್ಟು ಮಾಹಿತಿ ಹೊರಬೀಳಲಿದೆ.
ನನ್ನ ಕರಿಯರ್​ ಇಲ್ಲಿಗೆ ಮುಗಿತು… ಪಾಕಿಸ್ತಾನ ವಿರುದ್ಧ ಗೆಲ್ಲುತ್ತಿದ್ದಂತೆ ಭಾವುಕರಾದ ಟೀಂ ಇಂಡಿಯಾದ ಸ್ಟಾರ್​ ಆಟಗಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − four =
Remember me
