ಬೆಂಗಳೂರು: ನಟ ದರ್ಶಶ್‌ಗೆ ಸ್ವಲ್ಪ ಮುಂಗೋಪ, ಸಿಟ್ಟು ಜಾಸ್ತಿ. ಆದರೆ ಕೊಲೆ ಮಾಡುವಷ್ಟು ಕಟುಕನಲ್ಲ ಎಂದು ಮದ್ದೂರು ಶಾಸಕ ಕದಲೂರು ಉದಯ್ ಗೌಡ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನನಗೆ ಹಲವು ವರ್ಷಗಳಿಂದ ದರ್ಶನ್ ಸ್ನೇಹಿತ. ಆದರೆ ಈ ರೀತಿ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಜತೆಗಿರುವವರು ಮಾಡಿ ಇವರ ಮೇಲೆ ಏನಾದರೂ ಹಾಕಿದರಾ ಗೊತ್ತಿಲ್ಲ. ತನಿಖೆಯಿಂದ ಎಲ್ಲವೂ ಹೊರಗೆ ಬರಬೇಕು. ನಾನು ಈಗಲೇ ಏನನ್ನೂ ಹೇಳಲು ಆಗುವುದಿಲ್ಲ ಎಂದರು.
ಆತ ಸ್ವಲ್ಪ ಮುಂಗೋಪದಿಂದ ಮಾತನಾಡುತ್ತಾನೆ ಅಷ್ಟೇ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ತನಿಖೆ ನಡೆದು ಸತ್ಯ ಹೊರಗೆ ಬರಲಿ. ಇನ್ನೇನು ಕೆಲವೇ ದಿನಗಳಲ್ಲಿ ಸತ್ಯ ಹೊರಬರುತ್ತದೆ. ರಾಜ್ಯದ ಜನರಿಗ್ೂ ಗೊತ್ತಾಗುತ್ತದೆ ಎಂದರು.
ತಮ್ಮ ಗನ್ ಮ್ಯಾನ್ ಮೇಲೆ ದರ್ಶನ್ ಬೆಂಬಲಿಗರ ಹಲ್ಲೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ನನ್ನ ಗನ್ ಮ್ಯಾನ್ ಮೇಲೆ ಹಲ್ಲೆ ನಡೆದಿರುವುದು ಗೊತ್ತಿಲ್ಲ. ಅದೆಲ್ಲವೂ ಸುಳ್ಳು. ಆ ರೀತಿಯ ಘಟನೆ ಆಗೇ ಇಲ್ಲ. ನನಗೆ ಐದಾರು ಮಂದಿ ಗನ್ ಮ್ಯಾನ್ ಇದ್ದರು. ಹಲ್ಲೆ ಮಾಡಿದ್ದರೆ ನನಗೆ ಗೊತ್ತಾಗುತ್ತಿರಲಿಲ್ವೇ? ಅಂತಾದ್ದೂ ಯಾವುದೂ ಆಗಿಲ್ಲ. ಅದೆಲ್ಲವೂ ಸುಳ್ಳು ಸೃಷ್ಟಿಯಷ್ಟೇ ಎಂದು ಉದಯ್ ಗೌಡ ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − four =
Remember me
