ಬೆಂಗಳೂರು:86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ 6,7,8 ರಂದು ಮೂರು ದಿನಗಳ ಕಾಲ ನಡೆಸುವುದಕ್ಕೆ‌ ರಾಜ್ಯ ಸರಕಾರ ಬುಧವಾರ ನಿರ್ಧರಿಸಿದೆ.
ಕನ್ನಡ ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆದಿದೆ. ಬಳಿಕ ದಿನಾಂಕ ನಿಗದಿ ಮಾಡಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಅನುಮೋದನೆ ಪಡೆದು ಸಚಿವ ಸುನೀಲ್ ಕುಮಾರ್ ದಿನಾಂಕ ಘೋಷಣೆ ಮಾಡಿದ್ದಾರೆ.
ಸಮ್ಮೇಳನದಲ್ಲಿ 8 ರಿಂದ 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಅದ್ದೂರಿಯಾಗಿ 86ನೇ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಜಿಲ್ಲಾಡಳಿತ ಹಾಗೂ ಸ್ವಯಂ ಸೇವಕರ ಜತೆಗೆ ಚರ್ಚೆ ನಡೆಸುವುದಕ್ಕಾಗಿ ಅಕ್ಟೋಬರ್ 20 ರಂದು ಹಾವೇರಿಗೆ ತೆರಳಿ ಸ್ಥಳ‌ ಪರಿಶೀಲನೆ ನಡೆಸಲಾಗುವುದು. ಯಾವುದೇ ನ್ಯೂನ್ಯತೆ ಇಲ್ಲದಂತೆ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಸುನೀಲ್ ಕುಮಾರ್ ತಿಳಿಸಿದ್ದಾರೆ.
ಸಮ್ಮೇಳನ ಹಿನ್ನೆಲೆಯಲ್ಲಿ 45 ದಿನಗಳ ಕಾಲ ಕನ್ನಡ ರಥ ಇಡಿ ರಾಜ್ಯಾದ್ಯಂತ ಮೆರವಣಿಗೆ ನಡೆಸುತ್ತದೆ. 30 ರಿಂದ 40 ಸಾವಿರ ಜನರಿಗೆ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿ ದಿನ 2.50 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. 86ನೇ ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ 86 ಸಾಧಕರಿಗೆ ಈ ಬಾರಿ ಸನ್ಮಾನಿಸಲಾಗುತ್ತದೆ ಎಂದು ಹೇಳಿದರು.
ಸಮ್ಮೇಳನದ ಭಾಗವಾಗಿ 20ಕ್ಕೂ ಹೆಚ್ಚು ಉಪಸಮಿತಿಗಳನ್ನು ರಚನೆ ಮಾಡಲಾಗುತ್ತದೆ. ನಾನಾ ಘೋಷ್ಠಿಗಳು, ಪುಸ್ತಕ ಪ್ರದರ್ಶನದ ಜತೆಗೆ ಸಾಹಿತ್ಯಕ್ಕೆ ಸಂಬಂಧಪಟ್ಟ ಅನೇಕ ಚಟುವಟಿಕೆಗಳು ನಡೆಯುತ್ತವೆ ಎಂದು ಹೇಳಿದರು.
ಉದ್ಘಾಟನೆಗೆ 50 ಸಾವಿರ ಜನ :ಉದ್ಘಾಟನಾ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದು. ಸುಮಾರು 50 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಇರುವ ಬೃಹತ್ ಸಭಾಂಗಣ ನಿರ್ಮಿಸಲಾಗಿವುದು. ಹಿಂದೆಂದೂ ಕಾಣದಷ್ಟು ಅಚ್ಚುಕಟ್ಟಾಗಿ ಸಮ್ಮೇಳನ ಯಶಸ್ವಿಗೊಳಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + five =
Remember me
