ಚಿಕ್ಕಮಗಳೂರು: ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಹಚ್ಚಹಸುರಿನ ಧಾರ್ವಿುಕ ತಾಣ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದು, ಮುಸ್ಲಿಮರಿಬ್ಬರಿಗೂ ಅವಕಾಶ ಕಲ್ಪಿಸುವ ಮೂಲಕ 50 ವರ್ಷಗಳ ವಿವಾದಕ್ಕೆ ‘ಸೌಹಾರ್ದಯುತ ಪರಿಹಾರ’ ಮಾರ್ಗವನ್ನು ರಾಜ್ಯ ಸರ್ಕಾರ ಕಂಡುಕೊಂಡಿತ್ತು.
ನ.30ರಂದು ಬಾಬಾಬುಡನ್​ ಗಿರಿಯ ದತ್ತಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಲು ಹೈಕೋರ್ಟ್​ ಅನುಮತಿ ನೀಡಿತ್ತು. ಇದೀಗ ದತ್ತಾತ್ರೇಯ ಪೀಠಕ್ಕೆ ಅರ್ಚಕರ ನೇಮಕ ಆಗಿದ್ದು ಹಿಂದು ಸಂಘಟನೆಗಳು ಸಂಭ್ರಮಿಸಿವೆ.
ಇನಾಂ ದತ್ತಾತ್ರೇಯ ಪೀಠದಲ್ಲಿ ಅರ್ಚಕರ ನೇಮಕವಾಗಿದ್ದು. ವಿಎಚ್​ಪಿ, ಬಜರಂಗದಳ ಸಂಭ್ರಮಾಚರಣೆ ನಡೆಸಿವೆ. ನಗರದ ಆಜಾದ್ ಪಾರ್ಕ್​ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಎಚ್​ಪಿ, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ದ ಸಂದೀಪ್ ಅರ್ಚಕರಾಗಿ ನೇಮಕರಾಗಿದ್ದಾರೆ. ಇವರನ್ನು ವ್ಯವಸ್ಥಾಪನ ಸಮಿತಿ ಶಿಫಾರಸು ಮೇರೆಗೆ ನೇಮಕ ಮಾಡಿತ್ತು. ಈಗ ಅರ್ಚಕರ ಸಮ್ಮುಖದಲ್ಲಿ ಈ ಬಾರಿ ದತ್ತಜಯಂತಿ ಫಿಕ್ಸ್ ಆಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − one =
Remember me
