ದಾವಣಗೆರೆ:ಖಾಸಗಿ ಕ್ಷಣದ ವಿಡಿಯೋ ವೈರಲ್​ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಗಳಿಬ್ಬರು ಸಾವಿನ ಹಾದಿ ಹಿಡಿದಿರುವ ಆಘಾತಕಾರಿ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.
ಮೃತರನ್ನು ಆಲೂರಟ್ಟಿ ತಾಂಡಾದ ರತನ್ (20) ಮತ್ತು ಜಗಳೂರು ತಾಲೂಕಿನ ಗ್ರಾಮವೊಂದರ ಯುವತಿ ಎಂದು ಗುರುತಿಸಲಾಗಿದೆ. ಇಬ್ಬರೂ ದಾವಣಗೆರೆಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳಾಗಿದ್ದರು. ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳದುಬಂದಿದೆ.
ಕಾಲೇಜಿನ ಟೆರೆಸ್​ ಮೇಲೆ ಇಬ್ಬರು ಏಕಾಂತದಲ್ಲಿರುವುದನ್ನು ಗಮನಿಸಿ, ಅರಿವಿಗೆ ಬಾರದಂತೆ ಪಕ್ಕದ ಕಟ್ಟದಿಂದ ಮೊಬೈಲ್​ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಾಟ್ಸ್​ಆ್ಯಪ್​ಗಳಲ್ಲಿಯೂ ವಿಡಿಯೋ ಹರಿದಾಡಿತ್ತು. ಅಲ್ಲದೆ, ಕೆಲ ವೆಬ್​ಸೈಟ್​ಗಳಲ್ಲೂ ಸುದ್ದಿ ಪ್ರಕಟವಾಗಿತ್ತು.
ಇದನ್ನೂ ಓದಿ:ಸಹೋದರಿಯನ್ನು ಮುಂದಿಟ್ಟುಕೊಂಡು ಪತಿಯ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ ಪತ್ನಿಗೆ ಜೈಲು
ಖಾಸಗಿ ವಿಡಿಯೋ ವೈರಲ್ ಆಗಿ, ತಲೆತಗ್ಗಿಸುವಂತಾಗಿದ್ದಕ್ಕೆ ತೀವ್ರ ಮನನೊಂದಿದ್ದ ವಿದ್ಯಾರ್ಥಿನಿ ನಿನ್ನೆ ಆತ್ಮಹತ್ಯೆಗೆ ಶರಣಾದಳು. ಆಕೆಯ ಸಾವಿನ ಸುದ್ದಿ ಕೇಳಿದ ಆಲೂರಟ್ಟಿ ತಾಂಡಾದ ರತನ್ ಸಹ ಸಾವನ್ನಪ್ಪಿದ್ದಾನೆ. ರತನ್​ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ. ನಿನ್ನೆ ಸಂಜೆ ಆಲೂರಟ್ಟಿ ತಾಂಡಕ್ಕೆ ಆಗಮಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಕ್ಕಳನ್ನು ಕಳೆದುಕೊಂಡ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಯುವಕ ಮತ್ತು ಯುವತಿಯ ಪಾಲಕರು ಪ್ರತ್ಯೇಕವಾಗಿ ದೂರು ದಾಖಲಿಸಿದ್ದಾರೆ.(ಏಜೆನ್ಸೀಸ್​)
ಮೈ-ಬೆಂ ಹೆದ್ದಾರಿಯಲ್ಲಿ ಅಪಘಾತ: ನಟ ಲೋಕೇಶ್ ಸಾವು​, ನಿನ್ನೆಯಷ್ಟೇ ಹೊಸ ಬೈಕಿನ ರೀಲ್ಸ್​ ಪೋಸ್ಟ್​ ಮಾಡಿದ್ದರು

ಜಪಾನ್​ ಓಪನ್​ 2023; ಭಾರತದ ಲಕ್ಷ್ಯ ಸೇನ್​ಗೆ ಸೋಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 9 =
Remember me
