ಬೆಂಗಳೂರು:ರಾಜ್ಯ ರಾಜಧಾನಿಯಲ್ಲಿ ಮಳೆ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯ ವಾರ್ ರೂಮ್​​ಗೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸೋಮವಾರ ತಡರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೋಮವಾರ ಮಧ್ಯರಾತ್ರಿ ಮಳೆ ಸುರಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಬರುವ ದೂರುಗಳು ಹಾಗೂ ವಾರ್ ರೂಮ್ ಸಿಬ್ಬಂದಿ ಕಾರ್ಯವೈಖರಿಯನ್ನು ಶಿವಕುಮಾರ್ ಅವರು ಖುದ್ದು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳಿಗೆ ಕೆಲವು ಮಾರ್ಗದರ್ಶನ ನೀಡಿದರು.
ಭೇಟಿ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು:“ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಿರಂತರವಾಗಿ ಎರಡು ಗಂಟೆಗಳ ಕಾಲ ಮಳೆ ಬಂದಿದೆ. ಕೆಲವೆಡೆ ಸಂಚಾರ ಸಮಸ್ಯೆ ಎದುರಾಗಿದೆ. ಉಳಿದಂತೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಅವರ ದೂರು ಸ್ವೀಕಾರ ಹಾಗೂ ಅವುಗಳಿಗೆ ನಮ್ಮ ಅಧಿಕಾರಿಗಳು ಹೇಗೆ ಸ್ಪಂದಿಸುತ್ತಿದ್ದಾರೆ ಎಂದು ಪರಿಶೀಲನೆ ಮಾಡಲು ವಾರ್ ರೂಮ್ ಗೆ ಭೇಟಿ ನೀಡಿದ್ದೇನೆ.
ಪಾಲಿಕೆ ವಲಯ ಆಯುಕ್ತರು, ಜಂಟಿ ಆಯುಕ್ತರು ಮೇಲೆ ಬೀಳುತ್ತಿರುವ ಸ್ಥಳಗಳಿಗೆ ಭೇಟಿ ನೀಡಲು ಸೂಚನೆ ನೀಡಿದ್ದೇವೆ. ಅವರು ಹೆಚ್ಚು ಮಳೆ ಸುರಿದ ಪ್ರದೇಶಗಳಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ.
ಯಾವ ಕಾಲುವೆಗಳಲ್ಲಿ ಎಷ್ಟು ಪ್ರಮಾಣದ ನೀರು ಹರಿದು ಹೋಗುತ್ತಿದೆ ಎಂಬ ಮಾಹಿತಿ ಇಲ್ಲಿ ದಾಖಲಾಗುತ್ತಿವೆ. ನೂರಾರು ದೂರುಗಳು ಬರುತ್ತಿದ್ದು, ಇಲ್ಲಿನ ಸಿಬ್ಬಂದಿ ಅವುಗಳಿಗೆ ಸ್ಪಂದಿಸುತ್ತಿದ್ದಾರೆ. ನಾನು ಕೂಡ ಮೂರ್ನಾಲ್ಕು ದೂರುಗಳನ್ನು ಸ್ವೀಕರಿಸಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನಮ್ಮ ಅಧಿಕಾರಿಗಳು ಜಾಗರೂಕರಾಗಿ ಕೆಲಸ ಮಾಡುತ್ತಿದ್ದಾರೆ.
ಏರ್ಪೋರ್ಟ್ ಬಳಿ ಸಂಚಾರಿ ಸಮಸ್ಯೆ ಎದುರಾಗಿದೆ. ಅಲ್ಲಿಗೆ ಪಾಲಿಕೆ ಆಯುಕ್ತರು ಹೋಗಿದ್ದಾರೆ. ರಾಜರಾಜೇಶ್ವರಿ ನಗರದ ಕಡೆ ಹೆಚ್ಚಿನ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಉಳಿದಂತೆ ಎಲ್ಲೂ ಯಾವುದೇ ತೊಂದರೆ ಆಗಿಲ್ಲ.
ಮಳೆ ಬರುತ್ತಿರುವುದು ಸಂತೋಷದ ವಿಚಾರ. ಮಳೆ ಬರಲಿ. ನಾವು ಮುಂಜಾಗೃತಾ ಕ್ರಮವಾಗಿ ಅಧಿಕಾರಿಗಳು ಕೆಲಸ ಮಾಡಲಿದ್ದಾರೆ.
ಕೆ.ಆರ್ ವೃತ್ತ ಸೇರಿದಂತೆ ಇತರೆ ಕಡೆಗಳಲ್ಲಿ ನಾನು ಒಂದು ರೌಂಡ್ ಹಾಕಿಕೊಂಡು ಬಂದಿದ್ದೇನೆ. ಕೆ.ಆರ್ ವೃತ್ತದ ಬಳಿ ಕಳೆದ ಬಾರಿಯ ಅನಾಹುತ ಆಗಬಾರದು ಎಂದು ಅಂಡರ್ ಪಾಸ್ ಮುಚ್ಚಲಾಗಿದೆ.”
ಪಾಲಿಕೆ ಆಧಿಕಾರಿಗಳು, ಸಿಬ್ಬಂದಿಗೆ ಡಿಸಿಎಂ ಸೂಚನೆಗಳು:* ಸಂಭವನೀಯ ಅನಾಹುತಗಳನ್ನು ತಪ್ಪಿಸಲು ಅಧಿಕಾರಿಗಳು/ ಇಂಜಿನಿಯರ್ ಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು.* ರಾಜಧಾನಿ ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆ ವಹಿಸಬೇಕು. ಅವರ ಸುರಕ್ಷತೆ ಬಗ್ಗೆ ಸಿಬ್ಬಂದಿ ಗಮನ ಹರಿಸಬೇಕು.* ಸಹಾಯವಾಣಿ ಕೇಂದ್ರದಲ್ಲಿ (Helpline Centre) ಸಂಬಂಧಪಟ್ಟ ಅಧಿಕಾರಿಗಳು ಸದಾ ಜಾಗರೂಕರಾಗಿ ಇರಬೇಕು.* ಸಾರ್ವಜನಿಕರಿಂದ ಬಂದ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು.* ರಸ್ತೆ ಸಂಚಾರಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು.* ಪದೇ ಪದೇ ಅನಾಹುತ ಸಂಭವಿಸುವ ಕಡೆ ಹೆಚ್ಚು ಗಮನ ಕೊಡಬೇಕು.* ಯಾವುದೇ ಪ್ರಾಣಾಪಾಯಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕ್ಷಿಪ್ರ ನೆರವು ಒದಗಿಸಬೇಕು.* ಕಾಲುವೆಗಳಲ್ಲಿ, ಸರಾಗವಾಗಿ ನೀರು ಹರಿದು ಹೋಗಬೇಕು. ಇದಕ್ಕೆ ಇರುವ ಅಡಚಣೆಗಳನ್ನು ತೆರವುಗೊಳಿಸಬೇಕು.* ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ರೌಂಡ್ಸ್ ಮಾಡಿ, ರಸ್ತೆ ಮತ್ತು ಅಂಡರ್ ಪಾಸ್ ಗಳಲ್ಲಿ ನಿಂತಿರುವ ನೀರನ್ನು ತೆರವುಗೊಳ್ಳಬೇಕು.* ಪರಿಹಾರ ಕಾರ್ಯಗಳಿಗೆ ಯಾವುದೇ ಹಣಕಾಸಿನ ತೊಂದರೆ ಇರುವುದಿಲ್ಲ.* ನಾನು ಮತ್ತೆ ಯಾವುದೇ ಸಂದರ್ಭದಲ್ಲಿ ಬೇಕಾದರೂ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ.* ಅಸಡ್ಡೆ, ಬೇಜವಾಬ್ದಾರಿ ತೋರಿದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು.
3 ದಿನದ ಹಿಂದಷ್ಟೇ ಲಿವಿಂಗ್​ ಟುಗೆದರ್​ ಆರಂಭಿಸಿದ್ದ ಜೋಡಿ ದುರಂತ ಸಾವು! ವಿವಾಹಿತೆ-ಬ್ಯಾಚುಲರ್​ ಮಧ್ಯೆ ಏನಾಯ್ತು?

VIDEO| ಮನುಷ್ಯನನ್ನು ಮುದ್ದಾಡಿದ ಮೊಸಳೆ; ನೋಡಲು ಎಷ್ಟು ಮುದ್ದಾಗಿದೆ ಎಂದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
