ಬೆಂಗಳೂರು:ಯಾದಗಿರಿ ಪಿಎಸ್‌ಐ ಸಾವು ಪ್ರಕರಣದಲ್ಲಿ ಮೃತರ ಪತ್ನಿಗೆ ಸರ್ಕಾರದಿಂದ ಉದ್ಯೋಗ ಕೊಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಪಿಎಸ್‌ಐ ಸಾವು ಪ್ರಕರಣವನ್ನು ಈಗಾಗಲೇ ಸಿಒಡಿಗೆ ನೀಡಲಾಗಿದೆ. ಅವರು ತನಿಖೆ ಶುರು ಮಾಡಿದ್ದಾರೆ. ಪೋಸ್ಟ್ ಮಾರ್ಟಮ್ ರಿಪೋರ್ಟ್ ನಿರೀಕ್ಷೆ ಮಾಡುತ್ತಿದ್ದೇವೆ. ಅದು ಬಂದ ಮೇಲೆ ಯಾಕೆ ಸಾವಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ನಾನು ಬುಧವಾರ ಮೃತ ಪಿಎಸ್‌ಐ ಮನೆಗೆ ಹೋಗಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಅವರ ಪತ್ನಿಗೆ ಕೆಲಸ ಕೊಡಲು ನಾವು ತೀರ್ಮಾನ ಮಾಡಿದ್ದೇವೆ. ಅವರಿಗೆ ಪರಿಹಾರ ಮತ್ತು ಉದ್ಯೋಗ ನೀಡುವ ಕೆಲಸ ಮಾಡುತ್ತೇವೆ. ಉದ್ಯೋಗ ಕೊಡುವ ಸಂಬಂಧ ಸಿಎಂ ಜತೆಯೂ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.
ಶಾಸಕ ಮತ್ತು ಶಾಸಕನ ಪುತ್ರನ ಮೇಲೆ ಆರೋಪ ಕುರಿತ ಪ್ರಶ್ನೆಗೆ, ಈಗಾಗಲೇ ಸಿಒಡಿ ತನಿಖೆಗೆ ಕೊಡಲಾಗಿದೆ. ತನಿಖೆ ವರದಿ ಬರಲಿ. ತನಿಖೆಯಲ್ಲಿ ಶಾಸಕರು ಮತ್ತು ಅವರ ಪುತ್ರನ ಪಾತ್ರವಿದ್ದರೆ ಅವರ ವಿರುದ್ದವೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಸಿಎಂ ಬಗ್ಗೆ ಅನಾವಶ್ಯಕ ಆಪಾದನೆಗಳನ್ನು ಮಾಡಿ ವಿರೋಧ ಪಕ್ಷದವರು ಪಾದಯಾತ್ರೆ ಮಾಡಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಅದಕ್ಕೆ ಸರಿಯಾದ ಉತ್ತರ ಕೊಡಬೇಕು ಎಂದು ಹೈಕಮಾಂಡ್ ಹೇಳಿದೆ. ಪ್ರತಿಯೊಬ್ಬ ಸಚಿವರು ಅದರ ಬಗ್ಗೆ ಮಾತಾಡಬೇಕು ಎಂದು ಹೇಳಿದ್ದಾರೆ. ನಾವು ಅದನ್ನು ಈಗಾಗಲೇ ಮಾಡುತ್ತಿದ್ದೇವೆ. ನಾವು ಕೂಡಾ ಅವರು ಎಲ್ಲೆಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ ಅಲ್ಲಿ ಹಿಂದಿನ ದಿನವೇ ಹೋಗಿ ಅನೇಕ ಪ್ರಶ್ನೆಗಳನ್ನು ಹಾಕುತ್ತಿದ್ದೇವೆ. ನಿಮ್ಮ ಕಾಲದಲ್ಲಿ ಏನಾಗಿತ್ತು ಎಂದು ಪ್ರಶ್ನೆ ಕೇಳುತ್ತಿದ್ದೇವೆ. ಮುಡಾ ಬಗ್ಗೆ ಏನು ಸತ್ಯಾಂಶ ಏನು ಎನ್ನುವುದರ ಬಗ್ಗೆಯೂ ನಾವು ಹೇಳುತ್ತಿದ್ದೇವೆ ಎಂದರು.ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ. ನಮಗೆ ರಾಜ್ಯಪಾಲರು ಕ್ಯಾಬಿನೆಟ್ ನಿರ್ಣಯವನ್ನು ಒಪ್ಪುತ್ತಾರೆ ಎಂಬ ವಿಶ್ವಾಸವಿದೆ. ನೋಟಿಸ್ ವಾಪಸ್ ಪಡೆಯಬೇಕು ಎಂದು ಸಚಿವ ಸಂಪುಟ ಮನವಿ ಮಾಡಿದೆ. ಕ್ಯಾಬಿನೆಟ್ ರಾಜ್ಯಪಾಲರಿಗೆ ಈ ಪ್ರಕರಣದಲ್ಲಿ ಸತ್ಯಾಂಶ ಇಲ್ಲ ಎಂದು ನಿರ್ಣಯ ಮಾಡಿ ಕಳಿಸಿದಾಗ ಅದನ್ನು ಮೀರಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುತ್ತಾರೆ ಎಂದು ನಾನು ಅಂದುಕೊಳ್ಳುವುದಿಲ್ಲ. ರಾಜ್ಯಪಾಲರಿಗೆ ಅವರಿಗೇ ಪ್ರದತ್ತ ಅಧಿಕಾರ ಇರಬಹುದು.ಆದರೆ ಕ್ಯಾಬಿನೆಟ್ ಸಲಹೆಯನ್ನು ಅವರು ಅಷ್ಟು ಸುಲಭವಾಗಿ ತಿರಸ್ಕರಿಸಲು ಆಗುವುದಿಲ್ಲ ಎಂದುಕೊಳ್ಳುತ್ತೇನೆ. ಇದನ್ನು ಮೀರಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೆ ನಾವು ಕೂಡ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಮಂತ್ರಿಗಳ ಬದಲಾವಣೆ, ಸಂಪುಟ ಪುನರ್ ರಚನೆ ಚರ್ಚೆ ಮಾಡಿಲ್ಲ. ಅದರ ಬಗ್ಗೆ ವರಿಷ್ಠರಾದ ವೇಣುಗೋಪಾಲ್, ಸುರ್ಜೇವಾಲ ಏನು ಮಾತನಾಡಿಲ್ಲ. ಒಟ್ಟಾಗಿ ಕೆಲಸ ಮಾಡಿ, ಸರ್ಕಾರಕ್ಕೆ ಒಳ್ಳೆ ಹೆಸರು ತೆಗೆದುಕೊಂಡು ಬನ್ನಿ ಎಂದು ಹೇಳಿದ್ದಾರೆ ಎಂದು ಡಾ.ಜಿ.ಪರಮೇಶ್ವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + fourteen =
Remember me
