ಬೆಂಗಳೂರು: ಮಹಾನಗರ ಪಾಲಿಕೆ ನೌಕರರಿಗೂ 7ನೇ ವೇತನ ಆಯೋಗದ ಶಿಾರಸು ಅನ್ವಯಿಸುವುದು, ಎನ್‌ಪಿಎಸ್ ಬದಲು ಒಪಿಎಸ್ ಪಿಂಚಣಿ ಸೌಲಭ್ಯ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ, ಈ ತಿಂಗಳ 29ರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘವು ಎಚ್ಚರಿಕೆ ರವಾನಿಸಿದೆ.
ಸರಿಸುಮಾರು 14 ವರ್ಷಗಳಿಂದ ವೃಂದ ಹಾಗೂ ನೇಮಕ ನಿಯಮಾವಳಿ (ಸಿ ಆ್ಯಂಡ್ ಆರ್) ತಿದ್ದುಪಡಿ ಮಾಡದ ಕಾರಣ ಪಾಲಿಕೆ ನೌಕರರು ಆಡಳಿತ ಸೌಲಭ್ಯವನ್ನು ಪಡೆಯದೆ ವಂಚಿತರಾಗಿದ್ದಾರೆ. ಹೀಗಾಗಿ ಸಿ ಆ್ಯಂಡ್ ಆರ್ ರೂಲ್ಸ್ ಕರಡು ಅಧಿಸೂಚನೆ ಹೊರಡಿಸಿ ಪ್ರಕ್ರಿಯೆ ಆರಂಭಿಸಬೇಕು. ಸರ್ಕಾರಿ ನೌಕರರಿಗೆ ಜಾರಿಯಲ್ಲಿರುವಂತೆ ಪಾಲಿಕೆ ನೌಕರರಿಗೂ ಕೆಜಿಐಡಿ ಮತ್ತು ಸಾಮಾನ್ಯ ಭವಿಷ್ಯ ನಿಧಿ ಜಾರಿಗೊಳಿಸಬೇಕು ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯನ್ನು ನಮ್ಮ ನೌಕರರಿಗೂ ಅನ್ವಯಿಸುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘದ ಅಧ್ಯಕ್ಷ ಎ.ಅಮೃತ್‌ರಾಜ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + ten =
Remember me
