| ಮಂಜುನಾಥ ಕೋಳಿಗುಡ್ಡ ಬೆಳಗಾವಿ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆ ಫಲಾನುಭವಿ ಗಳಾಗಬೇಕೆಂಬ ಆಸೆಗಣ್ಣಿನಿಂದ ಕಾಯುತ್ತಿರುವ ಜನರಿಗೆ ಸಿಗುತ್ತಿಲ್ಲ ಹೊಸ ಬಿಪಿಎಲ್ ಕಾರ್ಡ್ ಸಿಗುತ್ತಿಲ್ಲ. ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ.
ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್​ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.
ರಾಜ್ಯದಲ್ಲಿ ಮೇ 14 ರಿಂದ 20ರ ನಡುವಿನ ಅವಧಿಯಲ್ಲಿ ಹೊಸ ಬಿಪಿಎಲ್ ಕಾರ್ಡ್​ಗಾಗಿ ಬರೋಬ್ಬರಿ 78 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ತುರ್ತು ಆರೋಗ್ಯ ಚಿಕಿತ್ಸೆಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮಾತ್ರ ಮೇ 18ರಿಂದ ವಿಲೇವಾರಿ ಮಾಡಿ ವಿತರಣೆ ಮಾಡಲಾಗುತ್ತಿದೆ. ಇನ್ನುಳಿದ ಹೊಸ ಅರ್ಜಿಗಳ ವಿಲೇವಾರಿ ಸ್ಥಗಿತಗೊಳಿಸಿದೆ. ಹೊಸ ಸರ್ಕಾರದ ಆದೇಶದ ಬಳಿಕ ಮುಂದಿನ ಅರ್ಜಿಗಳ ವಿಲೇವಾರಿ ಪ್ರಕ್ರಿಯೇ ಆರಂಭವಾಗಲಿದೆ.
2023 ಜನವರಿಗೆ ರಾಜ್ಯದಲ್ಲಿ ಬಿಪಿಎಲ್, ಅಂತ್ಯೋದಯ, ಎಪಿಎಲ್ ಸೇರಿ ಸುಮಾರು 5.28 ಕೋಟಿ ಜನರು ರೇಷನ್ ಕಾರ್ಡ್ ಫಲಾನುಭವಿಗಳಾಗಿದ್ದು, ಇವರಲ್ಲಿ ಸುಮಾರು 4.50ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್​ಗಳನ್ನು ರದ್ದುಪಡಿಸಲಾಗಿದೆ. ಜತೆಗೆ ಹೊಸ ಬಿಪಿಎಲ್ ಕಾರ್ಡ್​ಗಾಗಿ ಸುಮಾರು 4.25 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಕೆಲ ಅನರ್ಹಗೊಂಡಿರುವ ಕಾರ್ಡ್​ದಾರರು ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಹೊಸ ಬಿಪಿಎಲ್ ಅರ್ಜಿಗಳನ್ನು ಮರು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ ಹೊಸದಾಗಿ ಬಿಪಿಎಲ್ ಕಾರ್ಡ್​ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಹೊಸ ಬಿಪಿಎಲ್ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಬಂದ್ ಆಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಬೇಡಿಕೆ:ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್​ಗಳಿಗಾಗಿ ಆನ್​ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಅರ್ಜಿಗಳ ವಿಲೇವಾರಿ ಹಾಗೂ ಕಾರ್ಡ್​ಗಳ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಮುಂದಿನ ತಿಂಗಳಿನಿಂದ ಹೊಸ ಕಾರ್ಡ್​ಗಳ ವಿತರಣೆ ಕಾರ್ಯ ಆರಂಭವಾಗಲಿದೆ.
| ಶ್ರೀಶೈಲ್ ಬಿ. ಕಂಕಣವಾಡಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ

ದಂಪತಿ ಮಧ್ಯೆ ಪ್ರೀತಿ ಇದ್ದರೂ ದಾಂಪತ್ಯ ದ್ರೋಹ; ವಿವಾಹೇತರ ಸಂಬಂಧದ ಬಗ್ಗೆ ಇಲ್ಲ ಪಶ್ಚಾತ್ತಾಪ: ಏನಿದು ಅಧ್ಯಯನ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 7 =
Remember me
