ಬೆಂಗಳೂರು:ಕರ್ನಾಟಕದಲ್ಲಿ ಪ್ರಸಕ್ತ ವರ್ಷ ಡೆಂಘೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈವರೆಗೂ (ಸೆ. 3) 25,589 ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನ ತೀವ್ರತೆಗೆ 12 ಮಂದಿ ಮೃತಪಟ್ಟಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಡೆಂಘೆಯನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿದೆ.
ಈ ಸಂಬಂಧ ಸರ್ಕಾರ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರಡಿ ನಿಯಮಗಳನ್ನು ತಿದ್ದುಪಡಿ ಮಾಡಿದೆ. ಕರ್ನಾಟಕ ಸಾಂಕ್ರಾಮಿಕ ರೋಗಗಳು (ತಿದ್ದುಪಡಿ ನಿಯಮಗಳು) 2024 ಅನ್ನು ಕಳೆದ ವಾರ ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ.
ತಿದ್ದುಪಡಿ ಮಾಡಲಾದ ನಿಯಮಗಳ ಪ್ರಕಾರ, ಜಮೀನು, ಕಟ್ಟಡ ಅಥವಾ ನೀರಿನ ಟ್ಯಾಂಕ್‌ಗಳು, ಉದ್ಯಾನಗಳು, ಆಟದ ಮೈದಾನ ಸೇರಿ ಯಾವುದೇ ಸ್ಥಳದ ಮಾಲೀಕರು, ಒತ್ತುವರಿದಾರರು, ಬಿಲ್ಡರ್ ಅಥವಾ ಇತರ ವ್ಯಕ್ತಿಗಳು ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದು ಕಡ್ಡಾಯವಾಗಿದೆ. ಇದು ನೀರಿನ ಶೇಖರಣಾ ಪಾತ್ರೆಗಳು, ಸಂಪ್‌ಗಳು ಮತ್ತು ಓವರ್‌ಹೆಡ್ ಟ್ಯಾಂಕ್‌ಗಳನ್ನು ಸುರಕ್ಷಿತವಾಗಿ ಮುಚ್ಚಿರುವುದನ್ನು ಖಚಿತಪಡಿಸಿಕೊಳ್ಳುವುದನ್ನು ಒಳಗೊಂಡಿರುತ್ತದೆ.
ಸಕ್ಷಮ ಪ್ರಾಧಿಕಾರ ರಚನೆ:ಬಿಬಿಎಂಪಿ ಪ್ರದೇಶದ ಅಧಿಕಾರ ವ್ಯಾಪ್ತಿಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮುಖ್ಯ ಆಯುಕ್ತರು ಮತ್ತು ಬಿಬಿಎಂಪಿ ಪ್ರದೇಶ ಹೊರತುಪಡಿಸಿ ಉಳಿದ ಜಿಲ್ಲೆಗಳ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿದಂತೆ ಜಿಲ್ಲೆಯ ಉಪ ಆಯುಕ್ತರನ್ನು ಒಳಗೊಂಡ ಸಕ್ಷಮ ಪ್ರಾಧಿಕಾರ ರಚಿಸಲಾಗಿದೆ. ಈ ಪ್ರಾಧಿಕಾರವು ಡೆಂಘೆ ನಿಯಂತ್ರಣಾ ಕ್ರಮಗಳನ್ನು ಜಾರಿಗೆ ತರುವ, ಪರಿಶೀಲಿಸುವ ಮತ್ತು ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಅಧಿಕಾರ ಹೊಂದಿರುತ್ತದೆ.
ನಿಯಮಾನುಸಾರ ಒಮ್ಮೆ ಸೂಚನೆ ನೀಡಿದ ನಂತರ ಪ್ರಾಧಿಕಾರವು ಸೂರ್ಯೋದಯ ಮತ್ತು ಸೂರ್ಯಾಸ್ತದ ನಡುವೆ ಯಾವುದೇ ಭೂಮಿ ಅಥವಾ ಕಟ್ಟಡವನ್ನು ಪರಿಶೀಲಿಸಬಹುದು. ಅಂತಹ ಸಂದರ್ಭದಲ್ಲಿ ಮಾಲೀಕರು ಇಲ್ಲವೇ ಸಂಬಂಧಪಟ್ಟವರು ತಪಾಸಣೆಗೆ ಅನುಕೂಲ ಮಾಡಿಕೊಡಬೇಕು ಹಾಗೂ ಅಗತ್ಯ ಮಾಹಿತಿ ಒದಗಿಸಬೇಕು. ತಿದ್ದುಪಡಿ ಮಾಡಲಾದ ನಿಯಮಗಳ ಪ್ರಕಾರ ಸೊಳ್ಳೆಗಳ ಸಂತಾನೋತ್ಪತ್ತಿ ಕಂಡುಬಂದಲ್ಲಿ, ಪ್ರಾಧಿಕಾರವು ಸೂಕ್ತ ವಿಧಾನಗಳನ್ನು (ಭೌತಿಕ, ರಾಸಾಯನಿಕ, ಅಥವಾ ಜೈವಿಕ) ಬಳಸಿ ನಿರ್ದಿಷ್ಟ ಸ್ಥಳಗಳಲ್ಲಿ ಈಡಿಸ್ ಸೊಳ್ಳೆಗಳ ಸಂತಾನೋತ್ಪತ್ತಿ ನಿರ್ಮೂಲನೆ ನಿರ್ದಿಷ್ಟ ಸಮಯದೊಳಗೆ (24 ಗಂಟೆಗಳಿಗಿಂತ ಕಡಿಮೆಯಿಲ್ಲದ) ಕ್ರಮದ ಅಗತ್ಯವಿರುವ ಸೂಚನೆ ನೀಡಬಹುದು.
ದಂಡದ ಮೊತ್ತ ನಿಗದಿ:ಹೊಸ ನಿಯಮಾವಳಿಗಳ ಅಡಿಯಲ್ಲಿ, ಸಕ್ಷಮ ಪ್ರಾಧಿಕಾರವು ನಗರ ಮತ್ತು ಗ್ರಾಮೀಣ ಪ್ರದೇಶಗಳ ಕುಟುಂಬಗಳಿಗೆ ಕ್ರಮವಾಗಿ 400 ರೂ. ಮತ್ತು 200 ರೂ. ದಂಡ ವಿಧಿಸುವ ಅಧಿಕಾರ ಹೊಂದಿದೆ. ವಾಣಿಜ್ಯ ಸಂಸ್ಥೆಗಳು, ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳು, ಆರೋಗ್ಯ ಸೇವಾ ಕ್ಷೇತ್ರಗಳು ಇತ್ಯಾದಿಗಳಿಗೆ, ರಾಜ್ಯವು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕ್ರಮವಾಗಿ 1,000 ರೂ. ಮತ್ತು 500 ರೂ. ದಂಡ ನಿಗದಿಪಡಿಸಿದೆ. ಸಕ್ರಿಯ/ಕೈಬಿಡಲಾದ ನಿರ್ಮಾಣ ಸ್ಥಳಗಳು ಮತ್ತು ಖಾಲಿ ಜಾಗಗಳಿಗೆ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕ್ರಮವಾಗಿ 2,000 ರೂ. ಮತ್ತು 1,000 ರೂ. ದಂಡ ನಿಗದಿಪಡಿಸಲಾಗಿದೆ.
ಸಕ್ಷಮ ಪ್ರಾಧಿಕಾರದಿಂದ ಸೂಚನೆ ಸ್ವೀಕರಿಸಿದ ನಂತರ ಅನುಸರಣೆ ಮುಂದುವರಿಸದ ಪ್ರತಿ ವಾರಕ್ಕೆ ಒಟ್ಟು ದಂಡದ ಐವತ್ತು ಪ್ರತಿಶತ ಹೆಚ್ಚುವರಿಯಾಗಿ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
