ಬೆಂಗಳೂರು:ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಡೆಂಘ ಹಾವಳಿ ಹೆಚ್ಚಾಗುತ್ತಿದೆ. ಕೇವಲ 21 ದಿನಗಳಲ್ಲಿ 1,813 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಬೆಂಗಳೂರು ಒಂದರಲ್ಲೇ 1,330 ಹಾಗೂ ಇತರೆ 30 ಜಿಲ್ಲೆಗಳಿಂದ 483 ಕೇಸ್​ಗಳು ದಾಖಲಾಗಿವೆ.
ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಜನವರಿಯಿಂದ ಈವರೆಗೂ ಡೆಂಘ ಲಕ್ಷಣಗಳು ಕಂಡುಬಂದ 30,986 ಮಂದಿಯ ರಕ್ತದ ಮಾದರಿಯ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ 2,062, ಮೈಸೂರಿನಲ್ಲಿ 280, ವಿಜಯಪುರ-134, ಶಿವಮೊಗ್ಗ-120, ಬೆಳಗಾವಿ-112, ಚಿತ್ರದುರ್ಗ-104, ಧಾರವಾಡದಲ್ಲಿ 99 ಸೇರಿ ಒಟ್ಟು 4,108 ಪ್ರಕರಣಗಳು ದೃಢಪಟ್ಟಿವೆ. ಅದೃಷ್ಟವಶಾತ್ ಡೆಂಘ ಸಂಬಂಧಿತ ಸಾವು ವರದಿಯಾಗಿಲ್ಲ. ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಪರಿಣಾಮ ಡೆಂಘ ಹೆಚ್ಚುತ್ತಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ರಾಜ್ಯದಲ್ಲಿ ರೋಗವಾಹಕಗಳ ಹರಡುವಿಕೆ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಡೆಂಘ ವೈರಾಣು ಜ್ವರ ಆಗಿದ್ದು, ಈಡೀಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುತ್ತದೆ. ಮಳೆಗಾಲದಲ್ಲಿ ಈ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಗಟ್ಟಲು ಘನತ್ಯಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗುವುದನ್ನು ತಡೆಯುವುದು ಬಹಳ ಮುಖ್ಯವಾಗಿದೆ. ಹಠಾತ್ ಜ್ವರ, ತೀವ್ರ ತಲೆನೋವು, ಮೈಕೈ ನೋವು, ವಾಕರಿಕೆ, ವಾಂತಿ ಮತ್ತು ಮೈಮೇಲೆ ಕೆಂಪು ಬಣ್ಣದ ದದ್ದುಗಳು ಡೆಂಘಯ ರೋಗ ಲಕ್ಷಣಗಳಾಗಿದ್ದು, ರಕ್ತಸ್ರಾವ ಅಪಾಯಕಾರಿ ಚಿಹ್ನೆಯಾಗಿದೆ. ಡೆಂಘಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಅಥವಾ ಲಸಿಕೆ ಲಭ್ಯವಿಲ್ಲ. ಹೀಗಾಗಿ ರೋಗಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ನೀಡಲಾಗುತ್ತದೆ. ತಕ್ಷಣ ಚಿಕಿತ್ಸೆ ನೀಡದಿದ್ದರೆ, ಡೆಂಘ ಮಾರಣಾಂತಿಕವಾಗಬಹುದು. ಆದ್ದರಿಂದ ರೋಗ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ವೈದ್ಯರ ಸಲಹೆ ಪಡೆದು ರಕ್ತ ಪರೀಕ್ಷೆ ಮಾಡಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಘ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತವಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − three =
Remember me
