ಬೆಂಗಳೂರು: ಕುಮಾರಸ್ವಾಮಿ ಹಾಗೂ ಬೊಮ್ಮಾಯಿ ಅವರ ಜಂಟಿ ಸುದ್ದಿಗೋಷ್ಠಿ ನಡೆಸಿರುವ ಕುರಿತು ಉ‌ಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅದು ಅವರಿಗೆ ಬಿಟ್ಟ ವಿಚಾರ. ಆ ಬಗ್ಗೆ ನಾವು ಮಾತನಾಡುವುದಿಲ್ಲ. ಆದರೆ, ಜಾತ್ಯತೀತತೆ ವಿಚಾರವಾಗಿ ದೇವೇಗೌಡರು ತಮ್ಮ ಪುಸ್ತಕದಲ್ಲಿ ಹೇಳಿಕೊಂಡಿದ್ದಾರೆ. ದೇವೇಗೌಡರೇನು ತಮ್ಮ ಸಿದ್ಧಾಂತ ಬದಲಿಸಿದ್ದಾರಾ? ಎಂದು ಡಿಕೆಶಿ ವ್ಯಂಗ್ಯವಾಡಿದರು.
ಜೆಡಿಎಸ್‌ನ ಸಿದ್ಧಾಂತ, ಮೈತ್ರಿ ವಿಚಾರವಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಮಾತನಾಡಲಿ ಎಂದರು.
ಅಧಿವೇಶನಕ್ಕೆ ಬಿಜೆಪಿ ಗೈರಾದ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಗೆ ಸದನವನ್ನು ಎದುರಿಸುವ ಧೈರ್ಯವಿರಲಿಲ್ಲ. ಧೈರ್ಯ ಇದ್ದಿದ್ದರೆ ಸದನದ ಚರ್ಚೆಯಲ್ಲಿ ಭಾಗವಹಿಸುತ್ತಿದ್ದರು. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಿರುವುದನ್ನು ಕಂಡು ಬಿಜೆಪಿ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ. ಹೀಗಾಗಿ ಅನಗತ್ಯ ವಿಚಾರವಾಗಿ ಗದ್ದಲ ಮಾಡಿದ್ದಾರೆ ಎಂದರು.
ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕತ್ವದ ಮಹತ್ವ ಗೊತ್ತಿಲ್ಲ. ಇದು ಸಂವಿಧಾನಿಕ ಹುದ್ದೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಬಜೆಟ್ ಅಧಿವೇಶನ ಹಾಗೂ ರಾಜ್ಯಪಾಲರ ಭಾಷಣ ವಿರೋಧ ಪಕ್ಷದ ನಾಯಕರ ಅನುಪಸ್ಥಿತಿಯಲ್ಲಿ ನಡೆದಿದೆ. ರಾಜಕೀಯವಾಗಿ ತಮ್ಮ ಅಸ್ತಿತ್ವ ತೋರಿಸಲು ಧರಣಿಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ತಮಿಳುನಾಡು ಸಚಿವರು ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಪತ್ರ ಬರೆದು ಕರ್ನಾಟಕದಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕೇಳಿರುವ ಬಗ್ಗೆ ಪ್ರಶ್ನಿಸಿದಾಗ, ‘ಕರ್ನಾಟಕದಲ್ಲಿ ಈ ಬಾರಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ಆದರೂ ಇರುವ ನೀರಿನಲ್ಲೇ ಹರಿಸುವ ಸಾಧ್ಯತೆ ಬಗ್ಗೆ ಪರಿಶೀಲಿಸಬಹುದು. ಈ ತೀರ್ಮಾನ ಕಾವೇರಿ ಪ್ರಾಧಿಕಾರದ ಬಳಿ ಇದ್ದು, ನಾವು ಅದರ ತೀರ್ಮಾನ ಗೌರವಿಸುತ್ತೇವೆ ಎಂದರು.
ಕಾವೇರಿ ಪ್ರಾಧಿಕಾರದವರು ಕುಡಿಯುವ ನೀರಿನ ಅಗತ್ಯ ಗಮನದಲ್ಲಿಟ್ಟುಕೊಂಡು ನೀರು ಬಿಡಬೇಕಾಗುತ್ತದೆ. ಇಂದು, ನಾಳೆ ಮಳೆ ಬೀಳುವ ನಿರೀಕ್ಷೆ ಇದೆ. ಕಳೆದೆರಡು ವರ್ಷಗಳ ಕಾಲ ಉತ್ತಮ ಮಳೆಯಾಗಿತ್ತು’ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 7 =
Remember me
