ನವದೆಹಲಿ:ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನೀರಾವರಿ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.
ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡಿದ ದೇವೇಗೌಡ, ಕಾವೇರಿ, ಕೃಷ್ಣ, ಮಹದಾಯಿ ವಿಚಾರವಾಗಿ ಪ್ರಧಾನಿ ಮೋದಿ ಅವರಿಗೆ ವಿವರವಾದ ಪತ್ರ ಬರೆದಿದ್ದೇನೆ. ಇಂದು ಬೆಳಗ್ಗೆ ಮೋದಿ ಅವರನ್ನು ಭೇಟಿ ಮಾಡಿ ಈ ವಿಷಯಗಳ ಬಗ್ಗೆಯೇ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.
ನೀರಾವರಿ ವಿಷಯದಲ್ಲಿ ನಮ್ಮವರೇ ನನಗೆ ವಿರೋಧ ಮಾಡ್ತಾ ಇದ್ದಾರೆ ಅಂತ ಮೋದಿಯವರೇ ನನ್ನ ಬಳಿ ಹೇಳಿಕೊಂಡರು. ಆದರೆ ನಾನು ಅದಕ್ಕೆ ಪ್ರತಿಯಾಗಿ, ನೀರಾವರಿ ವಿಷಯದಲ್ಲಿ ನಾನು ಮತ್ತೆ ಹೋರಾಟ ಮಾಡೋ ತರಹ ಮಾಡಬೇಡಿ ಅಂತ ಹೇಳಿದೆ. ಈ ವಯಸ್ಸಲ್ಲೂ ನಾನು ಹೋರಾಟ ಮಾಡಲು ಸಿದ್ಧನಿರುವುದಾಗಿ ಮೋದಿಗೆ ತಿಳಿಸಿದ್ದೇನೆ ಎಂದು ದೇವೇಗೌಡ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + eighteen =
Remember me
