ತುಮಕೂರು: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರದ ಬೆನ್ನಲ್ಲೆ, ಖಾತೆ ಹಂಚಿಕೆ ವಿಚಾರದಲ್ಲಿ ಸಾಕಷ್ಟು ಲೆಕ್ಕಾಚಾರಗಳು ಆರಂಭವಾಗಿದೆ. ಇದರಂತೆ ಊಹಾಪೋಹಗಳೂ ಸೃಷ್ಟಿಯಾಗಿವೆ. ಈ ನಡುವೆ ನೂತನ ಸಚಿವರು ತಮ್ಮ ಮನದಿಂಗಿತವನ್ನು ಬೇರೆ ಬೇರೆ ರೀತಿಯಲ್ಲಿ ಬಹಿರಂಗಪಡಿಸುತ್ತಿದ್ದಾರೆ.
ನೂತನ ಸಚಿವರಾದ ಬಿ.ಸಿ.ಪಾಟೀಲ್ ಶನಿವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂ.ಡಾ.ಶ್ರೀ ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಚನ ಪಡೆದರು. ಈ ವೇಳೆ ನಗರ ಶಾಸಕ ಜಿ.ಬಿ ಜ್ಯೋತಿ ಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ ಮತ್ತಿತರರು ಇದ್ದರು.
ಇದೇ ವೇಳೆ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಹಳ್ಳಿ ಹಕ್ಕಿನೂ ಒಂಟಿ ಆಗೋಲ್ಲ, ಕುಮಟಳ್ಳೀನೂ ಒಂಟಿ ಅಲ್ಲ. ಸಿಎಂ ಯಡಿಯೂರಪ್ಪ ನುಡಿದಂತೆ ನಡೆದುಕೊಂಡಿದ್ದಾರೆ ಎಂದು ಬಿ.ಸಿ.ಪಾಟೀಲ್ ಹೇಳಿದರು.
ಯಾವ ಖಾತೆ ಕೊಟ್ಟರು ನಿಭಾಯಿಸಬಲ್ಲೆ. ನಾನು ಪೊಲೀಸ್ ಇಲಾಖೆಯಲ್ಲಿದ್ದರಿಂದ ಗೃಹಸಚಿವ, ಸುಧಾಕರ್ ಡಾಕ್ಟರ್ ಆಗಿರೋದರಿಂದ ನೀವೆ ( ಮಾಧ್ಯಮದವರು) ಊಹಿಸಿಬಿಡುತ್ತೀರಾ. ಮುಖ್ಯಮಂತ್ರಿಗಳಿಗೆ ಗೊತ್ತು ಪಾಟೀಲ್ ಗೆ ಯಾವ ಖಾತೆ ಕೊಟ್ಟರೆ ನಿಭಾಯಿಸಬಲ್ಲ ಅಂತ ಗೊತ್ತಿದೆ ಎಂದು ಪ್ರತಿಕ್ರಿಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 2 =
Remember me
