ಮಂಡ್ಯ:ಸಂಸದೆ ಸುಮಲತಾ ಅವರು ಇಂದು ಬಹಿರಂಗವಾಗಿ ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಿಗೆ ರಾಜ್ಯದಲ್ಲಿ ಈ ವಿಚಾರ ಭಾರಿ ಗಮನ ಸೆಳೆದಿದೆ. ಇದೀಗ ಅದೇ ಹಿನ್ನೆಲೆಯಲ್ಲಿ ಕೇಸರಿ ಶಾಲಿನ ವಿಚಾರ ಮುನ್ನೆಲೆಗೆ ಬಂದಿದೆ. ಹಳೆಯ ಘಟನೆಯೊಂದನ್ನು ನೆನಪಿಸಿಕೊಂಡು ಸಂಸದ ಪ್ರತಾಪ್​ಸಿಂಹ, ಸುಮಲತಾ ಅವರ ಕಾಲೆಳೆದ ಪ್ರಸಂಗವೂ ನಡೆದಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಡ್ಯಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಅಲ್ಲೀಗ ಭಾರಿ ಪೂರ್ವತಯಾರಿ ನಡೆಯುತ್ತಿದೆ. ಪ್ರಧಾನಿ ಭಾಗಿಯಾಗಲಿರುವ ಕಾರ್ಯಕ್ರಮದ ವೇದಿಕೆ ಸಿದ್ಧತೆ ವೀಕ್ಷಣೆಗಾಗಿ ಸಚಿವ ಕೆ.ಗೋಪಾಲಯ್ಯ, ಸಂಸದರಾದ ಪ್ರತಾಪ್​ ಸಿಂಹ ಮತ್ತು ಸುಮಲತಾ ಇಂದು ಮಂಡ್ಯದ ಗಜ್ಜಲಗೆರೆ ಬಳಿಗೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ:ವಯಾಗ್ರ ತೆಗೆದುಕೊಂಡ ಆತ ಅವಳ ಮಾತು ಕೇಳದೆ ಕೊನೆಗೆ ಸಾವಿಗೀಡಾದ!
ಸಚಿವ ಗೋಪಾಲಯ್ಯ, ಸಂಸದರಾದ ಪ್ರತಾಪ್ ಸಿಂಹ‌, ಸುಮಲತಾ ವೇದಿಕೆ ಸಿದ್ಧತೆ ಬಗ್ಗೆ ಚರ್ಚೆ ಮಾಡುತ್ತಿದ್ದಾಗ, ಮೇಡಮ್​ಗೆ ಯಾಕೆ ಕೇಸರಿ ಶಾಲು ಹಾಕಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್​ಗೆ ಪ್ರತಾಪ್​​ ಸಿಂಹ ಪ್ರಶ್ನೆ ಮಾಡುವ ಮೂಲಕ ಸುಮಲತಾ ಅವರಿಗೆ ತಮಾಷೆ ಮಾಡಿದ್ದರು. ಇದಕ್ಕೆ ಸುಮಲತಾ ನಗುತ್ತಲೇ ಉತ್ತರಕೊಟ್ಟು ಕೇಸರಿ ಶಾಲು ಹಾಕಿಕೊಂಡ ಪ್ರಸಂಗವೂ ನಡೆಯಿತು.
ಇದನ್ನೂ ಓದಿ:ಕಾಲೇಜು ವಿದ್ಯಾರ್ಥಿಗಳೇ.. ವೀರ್ಯಾಣು ದಾನ ಮಾಡಿ: ಸ್ಪರ್ಮ್ ಬ್ಯಾಂಕ್​ಗಳಿಂದ ಹೀಗೊಂದು ಮನವಿ; ಎಲ್ಲಿ, ಏಕೆ?
ಕಳೆದ ವಾರ ಮೋದಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯಲ್ಲೂ ಸಂಸದೆ ಸುಮಲತಾ ಭಾಗಿಯಾಗಿದ್ದರೂ ಅಂದು ಅವರು ಕೇಸರಿ ಶಾಲನ್ನು ಧರಿಸಿರಲಿಲ್ಲ. ಸಭೆಗೆ ಸ್ವಾಗತಿಸಿದ್ದ ಬಿಜೆಪಿ ಮುಖಂಡರು ಕೇಸರಿ ಶಾಲನ್ನು ನೀಡಿದ್ದರು. ಆದರೆ ಆ ಶಾಲನ್ನು ಸಂಸದೆ ಸುಮಲತಾ ಕೈಯಲ್ಲೇ ಹಿಡಿದು ಕುಳಿತಿದ್ದರು. ಅಂದು ಆ ಸಭೆಯಲ್ಲಿ ಕೂಡ ಪ್ರತಾಪ್ ಸಿಂಹ ಇದ್ದಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಗೋಪಾಲಯ್ಯ ಇದ್ದಿದ್ದರು. ಇದು ಅದೇ ವಿಚಾರವನ್ನು ನೆನಪಿಸಿಕೊಂಡು ಪ್ರತಾಪ್​ ಸಿಂಹ ಸಂಸದೆಯ ಕಾಲೆಳೆದಿದ್ದು, ಕೇಸರಿ ಶಾಲು ನೀಡುವಂತೆ ಪರೋಕ್ಷವಾಗಿ ಸೂಚಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
