ಬೆಂಗಳೂರು:ವೇತನ ಆಯೋಗ ರಚನೆ ಸಂಬಂಧ ಪೂರ್ವಭಾವಿಯಾಗಿ ಹಣಕಾಸು ಇಲಾಖೆ ಸೋಮವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿತು. ವೇತನ ಆಯೋಗದ ಮೇಲಿನ ಆಪೇಕ್ಷೆಗಳ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು, ಶೀಘ್ರವೇ ಮುಖ್ಯಮಂತ್ರಿಗೆ ಪೂರಕ ಕಡತ ಮಂಡಿಸಲಿದ್ದಾರೆ. ಇನ್ನೊಂದು ವಾರದೊಳಗೆ ಕೆಲವು ಪೂರಕ ದಾಖಲೆ ಹಾಗೂ ವರದಿ ಸಲ್ಲಿಸುವುದಾಗಿ ಸರ್ಕಾರಿ ನೌಕರರ ಸಂಘ ಕಾಲಾವಕಾಶ ಪಡೆದುಕೊಂಡಿದೆ.
ಕೇಂದ್ರ ಸರ್ಕಾರ ತನ್ನ ನೌಕರರ ಎ, ಬಿ, ಸಿ, ಡಿ ಶ್ರೇಣಿಗೆ ಎಷ್ಟು ಖರ್ಚು ಮಾಡುತ್ತಿದೆ, ಇಲ್ಲಿ ಯಾವ ರೀತಿ ಹೊಸ ಆಯೋಗದ ಶಿಫಾರಸು ಅನುಷ್ಠಾನ ಮಾಡಬೇಕಾಗಬೇಕಾಗುತ್ತದೆ ಎಂಬ ಬಗ್ಗೆ ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು. ಜತೆಗೆ ಇಲ್ಲಿನ ನೌಕರರಿಗೂ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡುವ ಅಗತ್ಯವೇನು ಎಂಬ ಸರ್ಕಾರಿ ನೌಕರರ ಸಂಘದ ವಾದವನ್ನು ಹಣಕಾಸು ಇಲಾಖೆ ಅಧಿಕಾರಿಗಳು ಒಪ್ಪಿಕೊಂಡರು.
2022-23ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ವೇತನ ಆಯೋಗ ರಚನೆ ಮಾಡುವಂತೆ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಬಜೆಟ್​ನಲ್ಲಿ ಈ ವಿಷಯ ಪರಿಗಣನೆ ಆಗದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯ ಪ್ರವೇಶಿಸಿ, ಒತ್ತಡ ತಂದಿದ್ದರು. ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೇತನ ಆಯೋಗ ರಚನೆ ಮಾಡಿ ಈ ವರ್ಷದಲ್ಲೇ ಅನುಷ್ಠಾನ ಮಾಡುವುದಾಗಿಯೂ ಘೋಷಿಸಿದ್ದರು.
ಸಭೆ ಕುರಿತು ವಿಜಯವಾಣಿಗೆ ಮಾಹಿತಿ ನೀಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ಐದು ವರ್ಷಕ್ಕೊಮ್ಮೆ ವೇತನ ಆಯೋಗ ರಚನೆಯಾಗಬೇಕು. ಈ ಹಿಂದೆ ಐದು ವರ್ಷ ಕಳೆದ ಬಳಿಕ ಒಂದು ವರ್ಷ ಒತ್ತಾಯ ಮಾಡಿದ ನಂತರ ಆಯೋಗ ರಚನೆಯಾಗಿ, ಅದರ ಅನುಷ್ಠಾನವಾಗುವಾಗ 7-8 ವರ್ಷ ಆಗುತ್ತಿತ್ತು. ಆದರೆ, ಈ ಬಾರಿ ಕಳೆದ ಆಯೋಗದ ಅವಧಿ ಐದು ವರ್ಷ ಪೂರ್ಣಗೊಳ್ಳುವುದರೊಳಗೆ ಹೊಸ ಆಯೋಗ ರಚನೆ ಬಗ್ಗೆ ಘೋಷಣೆ ಮಾಡಿದೆ. ಜುಲೈ 30ಕ್ಕೆ ಹಿಂದಿನ ಆಯೋಗದ ಅವಧಿ ಐದು ವರ್ಷ ಪೂರ್ಣಗೊಳ್ಳುತ್ತದೆ. ಅಷ್ಟರೊಳಗೆ ಸಮಿತಿ ರಚನೆಯಾಗುವ ವಿಶ್ವಾಸವಿದೆ ಎಂದು ಹೇಳಿದರು. ಕೇಂದ್ರದ ಹಾಗೂ ರಾಜ್ಯದ ವೇತನ ಶ್ರೇಣಿಯಲ್ಲಿ ವ್ಯತ್ಯಾಸವಿದೆ. ಈ ಬಗ್ಗೆ ಕೇಸ್ ಸ್ಟಡಿ ಮಾಡಿ ನಾವು ಸರ್ಕಾರಕ್ಕೆ ಅಧ್ಯಯನ ವರದಿಕೊಡುವವರಿದ್ದೇವೆ ಎಂದರು.
ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನವಾಗಿ ರಾಜ್ಯ ಸರ್ಕಾರಿ ನೌಕರರಿಗೂ ವೇತನ ನೀಡಬೇಕೆಂಬ ಬೇಡಿಕೆಗೆ ಸಿಎಂ ಭರವಸೆ ನೀಡಿದ್ದಾರೆ. ಅದನ್ನು ಈಡೇರಿಸುತ್ತಾರೆಂದು ಆರು ಲಕ್ಷ ನೌಕರರು ವಿಶ್ವಾಸ ಹೊಂದಿದ್ದಾರೆ.
|ಸಿ.ಎಸ್.ಷಡಾಕ್ಷರಿಸರ್ಕಾರಿ ನೌಕರರ ಸಂಘದ ಅಧ್ಯಕ್ಷ
40 ವರ್ಷದ ಬೇಡಿಕೆಗೆ ಈಗ ಚಲನೆ:ಕೇಂದ್ರ ಸರ್ಕಾರಿ ನೌಕರರಿಗೆ ನೀಡುವಷ್ಟೇ ವೇತನವನ್ನು ನಮಗೂ ಕೊಡಬೇಕೆಂಬ ಸರ್ಕಾರಿ ನೌಕರರ ಬೇಡಿಕೆ 40 ವರ್ಷ ಹಿಂದಿನದ್ದು, ಈ ಬಾರಿ ಬಜೆಟ್ ಮಂಡನೆ ಪೂರ್ವಭಾವಿಯಲ್ಲಿ ಈ ಕೂಗು ಪುನಃ ಕೇಳಿಬಂದಿತ್ತು. ಸರ್ಕಾರಿ ನೌಕರರ ಸಂಘ ನಿವೃತ್ತ ಅಧಿಕಾರಿಗಳ ಸಮಿತಿ ಬೇರೆ ಬೇರೆ ರಾಜ್ಯಗಳಲ್ಲಿನ ಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಿಸಿತ್ತು. 25 ರಾಜ್ಯಗಳಲ್ಲಿ ಕೇಂದ್ರಕ್ಕೆ ಸರಿಸಮಾನ ವೇತನ ನೀಡಲಾಗುತ್ತಿದೆ. ಈ ಸಂಗತಿಯನ್ನು ಸಂಘ ಸರ್ಕಾರದ ಗಮನಕ್ಕೆ ತಂದಿತ್ತು.
ಬೇಕು 10 ಸಾವಿರ ಕೋಟಿ ರೂ.:ರಾಜ್ಯದಲ್ಲಿ 5,20 ಲಕ್ಷ ಸರ್ಕಾರಿ ನೌಕರರು, 4 ಲಕ್ಷ ನಿವೃತ್ತ ನೌಕರರು, 3 ಲಕ್ಷದಷ್ಟು ನಿಗಮ, ಪ್ರಾಧಿಕಾರದ ಸಿಬ್ಬಂದಿಯ ವೇತನ ಪರಿಷ್ಕರಣೆಯಾಗಿ, ಕೇಂದ್ರಕ್ಕೆ ಸರಿಸಮಾನ ವೇತನ ನಿಗದಿಯಾದರೆ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 10 ಸಾವಿರ ಕೋಟಿ ರೂ. ಹೆಚ್ಚುವರಿ ಬೇಕಾಗಲಿದೆ ಎಂಬ ಪ್ರಾಥಮಿಕ ಅಂದಾಜಿದೆ. 2.60 ಲಕ್ಷ ಕೋಟಿ ಬಜೆಟ್ ಮಂಡಿಸುವ ಸರ್ಕಾರಕ್ಕೆ ಈ 10 ಸಾವಿರ ಕೋಟಿ ಹೊರೆಯಾಗದು ಎಂಬುದು ಸರ್ಕಾರಿ ನೌಕರರ ಸಂಘದ ಅಭಿಪ್ರಾಯವಾಗಿದೆ. ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಉಪಕಾರ್ಯದರ್ಶಿ ಪದ್ಮಾವತಿ, ಸರ್ಕಾರಿ ನೌಕರರ ಸಂಘದ ಖಜಾಂಚಿ ಶ್ರೀನಿವಾಸ್, ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್ ಮತ್ತಿತರರು ನಿಯೋಗದಲ್ಲಿದ್ದರು.
ಮಲಗಿಕೊಂಡೇ ಓದಿ 580 ಅಂಕ ಪಡೆದ ಶ್ರಾವ್ಯಾ!; ಕರುಳು ಕಾಯಿಲೆ ನಡುವೆಯೂ ಎಸ್ಸೆಸ್ಸೆಲ್ಸಿಯಲ್ಲಿ ಸಾಧನೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 1 =
Remember me
