ಬೆಂಗಳೂರು :ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ಮೇಲ್ವಿಚಾರಣೆಗೆ ಸುಪ್ರೀಂಕೋರ್ಟ್ ರಚನೆ ಮಾಡಿದ್ದ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ನೇತೃತ್ವದ ಸಮಿತಿಯನ್ನು ವಿಸರ್ಜನೆ ಮಾಡಿರುವ ಹೈಕೋರ್ಟ್, ಇನ್ನುಮುಂದೆ ಸ್ವತಃ ತಾನೇ ಮೇಲ್ವಿಚಾರಣೆ ನಡೆಸಲು ನಿರ್ಧರಿಸಿದೆ.ಸುಪ್ರೀಂಕೋರ್ಟ್ ನಿರ್ದೇಶನದಂತೆ ರಚನೆಯಾಗಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ವಿಶೇಷ ವಿಭಾಗೀಯ ಪೀಠ ಈ ನಿರ್ಧಾರಕ್ಕೆ ಬಂದಿದೆ.
ಪ್ರಕರಣ ಸಂಬಂಧ ಕಳೆದ ಡಿ.12ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ಆದೇಶದಂತೆ ಸಮಿತಿ ಮುಂದುವರೆಸುವುದು ಅಥವಾ ವಿಸರ್ಜನೆ ಮಾಡುವುದು ಹೈಕೋರ್ಟ್‌ನ ವಿವೇಚನೆಗೆ ಬಿಟ್ಟದ್ದಾಗಿದೆ ಎಂದು ತಿಳಿಸಿದೆ. ಸಮಿತಿಯ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರೂ ಸಹ ಸಮಿತಿ ಮುಂದುವರೆಯುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಆದ್ದರಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ನ್ಯಾಯಪೀಠ ತಿಳಿಸಿದೆ.
ವಿಚಾರಣೆ ವೇಳೆ ಅಡ್ವೋಕೇಟ್ ಜನರ್ ಶಶಿಕಿರಣ ಶೆಟ್ಟಿ ಸಲ್ಲಿಸಿದ್ದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಸುಪ್ರೀಂಕೋರ್ಟ್ ನಿಗದಿಪಡಿಸಿದ ಕೆಲಸವನ್ನು ಕಾರ್ಯಗತಗೊಳಿಸಲು ಸಮಿತಿ ನಡೆಸಿ ಕಾರ್ಯಕಲಾಪಗಳಿಗೆ ಸಿಬ್ಬಂದಿಯ ವೇತನವೂ ಸೇರಿ 17,95,10,448 ರೂ.ಗಳು ವೆಚ್ಚವಾಗಿದೆ. ಸಮಿತಿಯ ಪ್ರಕ್ರಿಯೆಯ ದತ್ತಾಂಶಗಳನ್ನು ಸಂಗ್ರಹಿಸುವುದಕ್ಕಾಗಿ ಏಜನ್ಸಿಯೊಂದಕ್ಕೆ 3 ಕೋಟಿ ರೂ. ಗಳ ವೆಚ್ಚ ಮಾಡಲಾಗಿದೆ. ಈ ದತ್ತಾಂಶ ಅಭಿವೃದ್ಧಿ ನಿರ್ವಹಣೆಗೆ 3 ವರ್ಷಗಳಿಂದ 3 ಕೋಟಿ ರೂ.ಗಳನ್ನು ಪ್ರತ್ಯೇಕವಾಗಿ ವೆಚ್ಚ ಮಾಡಲಾಗಿದೆ. ಈ ವೆಚ್ಚ ಬಿಡಿಎ ಅಥಾವ ಸಮಿತಿ ಭರಿಸಿಲ್ಲ. ಆದರೆ, ಸಾರ್ವಜನಿಕರ ಹಣವನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪೀಠ ಬೇಸರ ವ್ಯಕ್ತ ಪಡಿಸಿದೆ.
ಸಮಿತಿಗಾಗಿ ಈಗಾಗಲೇ ಸುಮಾರು 18 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಆದರೆ, ಮುಂದಿನ ವೆಚ್ಚವನ್ನು ನಿಲ್ಲಿಸುವುದಕ್ಕಾಗಿ ನ್ಯಾಯಲಯವೇ ಮೇಲ್ವಿಚಾರಣೆ ಮಾಡುವುದು ಸೂಕ್ತ ಕ್ರಮವಾಗಿದೆ. ಇದರಿಂದ ಪ್ರತ್ಯೇಕವಾಗಿ ಸಮಿತಿಗೆ ವೆಚ್ಚ ಮಾಡುವ ಅಗತ್ಯ ಎದುರಾಗುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ. ಈ ಸಮಿತಿ ಅಗತ್ಯವಿರುವ ಎಲ್ಲ ಕಾರ್ಯಗಳನ್ನು ಪೂರ್ಣಗೊಳಿಸಿದ್ದು, ಮೇಲ್ವಿಚಾರಣೆ ಬಳಿಕ ಅದನ್ನು ಕಾರ್ಯಗತಗೊಳಿಸಬಹುದಾಗಿದೆ. ಆದ್ದರಿಂದ ಸಮಿತಿ ವಿಸರ್ಜನೆ ಮಾಡುವಂತೆ ಅಧ್ಯಕ್ಷರಾಗಿದ್ದ ನಿವೃತ್ತ ನ್ಯಾಯಮೂರ್ತಿಗಳ ಅಭಿಪ್ರಾಯವನ್ನು ಒಪ್ಪಿಕೊಳ್ಳಬಹುದಾಗಿದೆ ಎಂದು ಪೀಠ ತಿಳಿಸಿದೆ.ಅಲ್ಲದೆ, ಸಮಿತಿಯ ದಾಖಲೆಗಳ ದತ್ತಾಂಶವನ್ನು ಸಂಗ್ರಹಿಸಿರುವ ಕಚೇರಿಯ ಆವರಣವನ್ನು ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಮತ್ತು ಹೈಕೋರ್ಟ್‌
ನ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಮಿತಿಯ ಕಚೇರಿಯಲ್ಲಿನ ದಾಖಲೆಗಳ ದಾಸ್ತಾನು ಮಾಡಿ ಈಗಾಗಲೇ ಕಂಪ್ಯೂಟರ್‌ನಲ್ಲಿ ಸಂಗ್ರಹಿಸಿರುವ ದತ್ತಾಂಶವನ್ನು ವಶಕ್ಕೆ ಪಡೆದುಕೊಳ್ಳಬೇಕು ಮತ್ತು ಹೈಕೋರ್ಟ್‌ಗೆ ಸಮಿತಿ ನಿರ್ವಹಣೆ ಮಾಡುವ ವಿಭಾಗಕ್ಕೆ ವರ್ಗಾವಣೆ ಮಾಡಬೇಕು. ಈ ಎಲ್ಲ ದಾಖಲೆಗಳು ನ್ಯಾಯಾಲಯದ ವಶದಲ್ಲಿಟ್ಟುಕೊಳ್ಳಬೇಕು ಎಂದು ಪೀಠ ತಿಳಿಸಿದೆ. ಜತೆಗೆ, ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನ ಅಧೀನದಲ್ಲಿರುವ ದಾಖಲೆಗಳನ್ನು ಹಸ್ತಾಂತರಿಸುವಂತೆ ಸುಪ್ರೀಂಕೊರ್ಟ್‌ನ ಅಧಿಕಾರಿಗಳೊಂದಿಗೆ ಸಂವಹನ ನಡೆಸುವಂತೆ ನ್ಯಾಯಪೀಠ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
