ಬೆಂಗಳೂರು:ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಪಟ್ಟಿದ್ದ ಮಾಜಿ ಮೇಯರ್​, ಕಾಂಗ್ರೆಸ್​ ಮುಖಂಡ ಸಂಪತ್​ರಾಜ್​ ಅವರನ್ನು ಜೈಲಿಗೆ ಶಿಫ್ಟ್​ ಮಾಡಲಾಗಿದೆ.
ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್​ಭೈರಸಂದ್ರ ಗಲಭೆಯಲ್ಲಿ ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕು ನೀಡಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಸಂಪತ್​ರಾಜ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 67ನೇ ಸಿಟಿ ಸಿವಿಲ್​ ಮತ್ತು ಸೆಷನ್ಸ್​ ನ್ಯಾಯಾಲಯ ಆದೇಶಿಸಿದೆ.
ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಂಪತ್​ರಾಜ್​ರನ್ನು ಸಿಸಿಬಿ ಪೊಲೀಸರು ನ.15ರಂದು ಬಂಧಿಸಿದ್ದರು. ಮೂರು ದಿನ ವಶಕ್ಕೆ ಪಡೆದು ವಿಚಾರಣೆ ನಡೆಸಿ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಕಾತ್ಯಾಯಿನಿ, 24ರವರೆಗೆ ಸಂಪತ್​ರಾಜ್​ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಅಖಂಡ ಶ್ರೀನಿವಾಸ ಮೂರ್ತಿ ಸೋದರಳಿಯ ನವೀನ್​, ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ಪ್ರಕಟಿಸಿದ ವಿಚಾರಕ್ಕೆ ಉದ್ರಿಕ್ತ ಗುಂಪೊಂದು ಆ.11ರ ರಾತ್ರಿ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿಯಲ್ಲಿ ಗಲಭೆ ಎಬ್ಬಿಸಿತ್ತು. ಇದೇ ವೇಳೆ ಅಖಂಡ ಮನೆಗೆ ಬೆಂಕಿ ಹಚ್ಚಿಸಿರುವ ಆರೋಪ ಸಂಪತ್​ರಾಜ್​ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ತನಗೆ ಅನಾರೋಗ್ಯ ಎಂದು ಆಸ್ಪತ್ರೆ ಸೇರಿದ್ದ ಸಂಪತ್​ರಾಜ್​, ಬಳಿಕ ನಾಪತ್ತೆಯಾಗಿದ್ದರು.
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್​ರಾಜ್​ ವಿಚಾರಣೆ ನಡೆಸಲು ರಾಷ್ಟ್ರೀಯ ತನಿಖಾ ದಳಕ್ಕೆ(ಎನ್​ಐಎ) ಕೋರ್ಟ್​ ಅನುಮತಿ ನೀಡಿದೆ. ನ. 23 ಮತ್ತು 24ರಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿಯೇ ವಿಚಾರಣೆ ನಡೆಸುವಂತೆ ಎನ್​ಐಎ ಅಧಿಕಾರಿಗಳಿಗೆ ಸೂಚಿಸಿದೆ. ಅಲ್ಲದೆ, ಸಂಪತ್​ರಾಜ್​ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿ ವಿಚಾರಣೆಯನ್ನು 24ಕ್ಕೆ ಮುಂದೂಡಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿದೆ.
ನಾನು ಬೀದಿಗೆ ಬಂದಿರುವೆ, ನನ್ನ ಕೈ ಹಿಡಿಯಿರಿ… ಎಂದು ಬೇಡಿದ ಅಖಂಡ ಶ್ರೀನಿವಾಸ ಮೂರ್ತಿ

ರಾತ್ರೋರಾತ್ರಿ ಮನೆಯಲ್ಲೇ ಪತ್ನಿಯನ್ನು ಕೊಚ್ಚಿ ಹಾಕಿದ ಭೂಪ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 11 =
Remember me
