ಬೆಂಗಳೂರು:ಗಲಭೆಗೆ ಕಾರಣ ಅವರ ಕಾರ್ಯಕರ್ತ ಟ್ವೀಟ್ ಮಾಡಿದ್ದು, ಗಲಭೆ ನಿಯಂತ್ರಿಸಲು ಹೋಮ್ ಮಿನಿಸ್ಟರ್ ಕಂಪ್ಲೀಟ್ ಫೇಲ್ಯೂರ್ ಆಗಿದ್ದಾರೆ. ಮೂರು ಗಂಟೆ ಅವಧಿಯಲ್ಲಿ ಗಲಭೆ ನಿಯಂತ್ರಿಸಲಿಲ್ಲ. ಗಲಾಟೆ ಮಾಡಲು ಬಿಟ್ಬಿಟ್ಟು ಈಗ ಜಾತಿ ಬಣ್ಣ ಬಳಿಯುತ್ತಿದ್ದಾರೆ ಇವ್ರು. ಅಖಂಡ ಶ್ರೀನಿವಾಸ್​ ನಮ್ಮ ಶಾಸಕ, ನಮ್ಮ ಶಾಸಕನ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ. ನಮ್ಮ ಶಾಸಕನ ಮನೆ ಮೇಲಿನ ದಾಳಿಯನ್ನ ಕಟುವಾಗಿ ಖಂಡಿಸಿದ್ದೇವೆ… ಎಂದು ವಾಗ್ದಾಳಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಬಿಜೆಪಿಯವರ ಒಳ ತಂತ್ರದಿಂದಲೇ ಗಲಭೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್ ಮತ್ತು ಎಸ್​ಡಿಪಿಐ ರಾಜಕೀಯ ಮೇಲಾಟದಿಂದ ಗಲಭೆ ನಡೆದಿದೆ ಎಂದಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿರುದ್ಧ ಏಕವಚನದಲ್ಲೇವಾಗ್ದಾಳಿ ನಡೆಸಿದ ಆಕ್ರೋಶ ಹೊರಹಾಕಿದರು. ಆ ಮಾತು ಹೇಳಲು ಬೊಮ್ಮಾಯಿ ಯಾರು? ಅವನು ಅಥಾರಿಟೀನಾ? ಸಬ್ ಇನ್​ಸ್ಪೆಕ್ಟರಾ? ಆಯೋಗನಾ? ನಮ್ಮ ಕಾರ್ಪೋರೇಟರ್​ಗಳಿಗೆ ನೋಟಿಸ್ ಕೊಟ್ಟು‌ ಬ್ಲ್ಯಾಕ್​ಮೇಲ್ ಮಾಡ್ತಿದ್ದಾರೆ.. ಏನ್ ನಡೀತಿದೆ ಇಲ್ಲಿ? ನಾವೇನು ಸುಮ್ನೆ ಕೂತಿದ್ದೀವಾ? ಎಂದು ಕಿಡಿಕಾರಿದರು. ಗಲಭೆಕೋರರ ವಿರುದ್ಧ ಕಠಿಣ ಕ್ರಮ‌ ತೆಗೆದುಕೊಳ್ಳಿ. ಇದಕ್ಕೆ ನಮ್ಮ ಬೆಂಬಲವೂ ಇದೆ. ಅದನ್ನು ಬಿಟ್ಟು ಕಾಂಗ್ರೆಸ್​ನಲ್ಲಿ ಒಳ ಜಗಳ ಇದೆ ಅಂತ ಹೇಳಲು ಬೊಮ್ಮಾಯಿ ಯಾರು? ಕಾಂಗ್ರೆಸ್​ನಲ್ಲಿ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿರಿಪುಂಡರ ದಾಂಧಲೆ ಬಗ್ಗೆ ಕೊನೆಗೂ ದೂರು ದಾಖಲಿಸಿದ ಅಖಂಡ ಶ್ರೀನಿವಾಸ್​ ಮೂರ್ತಿ, ಯಾರ ವಿರುದ್ಧ ಗೊತ್ತಾ?
ಬಿಜೆಪಿಯೊಳಗೆ ಸಾಕಷ್ಟು ಆಂತರಿಕ ಕಚ್ಚಾಟ ಇದೆ. ಅವರ ಒಳ ತಂತ್ರದಿಂದಲೇ ಗಲಭೆ ನಡೆದಿದ್ದು ಎಂದು ಆರೋಪಿಸಿದ ಡಿಕೆಶಿ, ಘಟನೆ ಬಗ್ಗೆ ಆಂತರಿಕ ತನಿಖೆ ಮಾಡ್ತಿದ್ದೀವಿ. ಆದರೆ, ಬಿಜೆಪಿಯವ್ರು ನಮ್ಮ ಕಾರ್ಪೋರೇಟರ್​ಗಳಿಗೆ ಪೊಲೀಸರಿಂದ ಹೆದರಿಸುತ್ತಿದ್ದಾರೆ. ಇದೇ ಹೇಳಿಕೆ ಕೊಡಬೇಕು ಎಂದು ಅಖಂಡ ಶ್ರೀನಿವಾಸ್​ ಮೂರ್ತಿ ಮೇಲೆ ಬಿಜೆಪಿ ಒತ್ತಡ ಹಾಕ್ತಿದೆ ಎಂದು ಹೊಸ ಬಾಂಬ್​ ಸಿಡಿಸಿದರು.
ಇಂದು ಸಂವಿಧಾನಕ್ಕೆ ಅಪಚಾರವಾಗ್ತಿದೆ. ಸಂವಿಧಾನ ಅಳಿಸುವ ಮೇಲಾಟ ನಡೆದಿದೆ. ಕೋಮುವಾದ, ದ್ವೇಷದಬೀಜ ಬಿತ್ತುತ್ತಿದ್ದಾರೆ. ಈ ವಿಷ ಬೀಜವನ್ನ ನಾವು ಕಿತ್ತುಹಾಕಬೇಕಿದೆ ಎಂದ ಡಿಕೆಶಿ, ರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆ ತರಬೇಕಿದೆ. ಮುಂದಿನ ದಿನದಲ್ಲಿ ಕೆಂಪುಕೋಟೆಯಲ್ಲಿ ನಾವು ಭಾಷಣ ಮಾಡ್ತೇವೆ. ನಮ್ಮ ಪಕ್ಷವೇ ಅಧಿಕಾರ ಹಿಡಿಯಲಿದೆ. ಅದಕ್ಕೆ ನಾವು ಇಲ್ಲಿಂದಲೇ ಧ್ವನಿ ನೀಡಬೇಕಿದೆ. ಯುವಜನತೆಯ ಮೂಲಕ ಹೋರಾಟ ಮಾಡಬೇಕಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಕಾಂಗ್ರೆಸ್ ಮುಖಂಡನೇ ಡಿಜೆ ಹಳ್ಳಿ ಗಲಭೆಯ ಕಿಂಗ್​ಪಿನ್! ಮನೆಯಲ್ಲೇ ಕೂತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿಸಿದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
