ಬೆಂಗಳೂರು:ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್​ಭೈರಸಂದ್ರ ಗಲಭೆಯಲ್ಲಿ ಮನೆ ಕಳೆದುಕೊಂಡ ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ್​ ಮೂರ್ತಿ ಕಾಂಗ್ರೆಸ್​ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ದಿಗ್ವಿಜಯಸುದ್ದಿ ವಾಹಿನಿ ಜತೆ ಮಾತನಾಡಿದ ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ್​, ಕಿಡಿಗೇಡಿಗಳು ನನ್ನ ಮನೆಗೆ ಬೆಂಕಿ ಇಟ್ಟರು. ಗಲಭೆ ನಡೆದುಇಷ್ಟುದಿನವಾದರೂ ಕೆಪಿಸಿಸಿ ಅಧ್ಯಕ್ಷರು ನನ್ನ ಮನೆಗೆ ಭೇಟಿ ನೀಡಿಲ್ಲ. ಕಾಂಗ್ರೆಸ್​ನವರು ನನ್ನ ನೆರವಿಗೆ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸುಟ್ಟು ಹೋಗಿರುವುದು ನಾನು ಬಾಳಿ ಬದುಕಿದ ಮನೆ, ಡಿ.ಕೆ.ಶಿವಕುಮಾರ್​ ಅವರ ಮನೆ ಸುಟ್ಟಿಲ್ಲ. ಅವರು ನನ್ನ ಮನೆಯನ್ನು ಬಂದು ನೋಡಲಿ, ಆಮೇಲೆ ಮಾತನಾಡಲಿ ಎಂದು ಅಸಮಾಧಾನ ಹೊರಹಾಕಿದರು. ನನ್ನ ಪರವಾಗಿ ಮಾತನಾಡಿದ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ಇದನ್ನೂ ಓದಿರಿಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಮುಸ್ಲಿಂ ಮುಖಂಡರ ಭೇಟಿ, ಮನೆ ಕಟ್ಟಿಸಿಕೊಡುವುದಾಗಿ ಭರವಸೆ!
ನಾನು ಯಾರ ಜತೆಗೂ ದ್ವೇಷ ಸಾಧಿಸಿಲ್ಲ, ಎಲ್ಲರ ಜತೆಗೂ ಸಾಮರಸ್ಯದಿಂದ ಇದ್ದೆ. ಯಾರು ದಾಳಿ ಮಾಡಿದ್ದಾರೋ ಅವರ ಮೇಲೆ ಪೋಲಿಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಖಂಡ ಶ್ರೀನಿವಾಸ್​ ಮೂರ್ತಿ ಹೇಳಿದರು.
ಗಲಭೆ ಸಂಬಂಧ ಇಂತದ್ದೇ ಹೇಳಿಕೆ ಕೊಡುವಂತೆ ಅಖಂಡ ಶ್ರೀನಿವಾಸ ಮೂರ್ತಿ ಮೇಲೆ ಸರ್ಕಾರ ಒತ್ತಡ ಹಾಕುತ್ತಿದೆ ಎಂಬ ಡಿ.ಕೆ. ಶಿವಕುಮಾರ್​ ಹೇಳಿಕೆಯನ್ನು ತಳ್ಳಿ ಹಾಕಿದ ಶಾಸಕರು, ಸರ್ಕಾರ ನನ್ನ ಮೇಲೆ ಯಾವುದೇ ರೀತಿಯ ಒತ್ತಡ ಹಾಕುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಡಿಜೆ ಹಳ್ಳಿ ಗಲಭೆ ಬಗ್ಗೆ ಇಂದು(ಶನಿವಾರ) ಬೆಳಗ್ಗೆ ಮಾತನಾಡಿದ್ದ ಡಿ.ಕೆ.ಶಿವಕುಮಾರ್​, ಬಿಜೆಪಿಯೊಳಗೆ ಸಾಕಷ್ಟು ಆಂತರಿಕ ಕಚ್ಚಾಟ ಇದೆ. ಅವರ ಒಳ ತಂತ್ರದಿಂದಲೇ ಗಲಭೆ ನಡೆದಿದೆ ಎಂದು ಆರೋಪಿಸಿದ್ದರು. ಬಿಜೆಪಿಯವ್ರು ನಮ್ಮ ಕಾರ್ಪೋರೇಟರ್​ಗಳಿಗೆ ಪೊಲೀಸರಿಂದ ಹೆದರಿಸುತ್ತಿದ್ದಾರೆ. ಇದೇ ಹೇಳಿಕೆ ಕೊಡಬೇಕು ಎಂದು ಅಖಂಡ ಶ್ರೀನಿವಾಸ್​ ಮೂರ್ತಿ ಮೇಲೆ ಬಿಜೆಪಿ ಒತ್ತಡ ಹಾಕ್ತಿದೆ ಎಂದು ಹೊಸ ಬಾಂಬ್​ ಸಿಡಿಸಿದ್ದರು. ಇದರ ಬೆನ್ನಲ್ಲೇ ಡಿಕೆಶಿ ಹೇಳಿಕೆಯನ್ನು ಶಾಸಕರು ತಳ್ಳಿ ಹಾಕಿದ್ದಾರೆ.
‘ಜಮೀರ್​ ಅಹ್ಮದ್​ ಬೆಂಗಳೂರು ಗಲಭೆಯ ಡೈರೆಕ್ಟರ್​, ಪ್ರೊಡ್ಯೂಸರ್​…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + one =
Remember me
