ಬೆಂಗಳೂರು:ರಾಜ್ಯದಲ್ಲಿ ಇನ್ಮುಂದೆ ಜೆಡಿಎಸ್ ಇರೋದಿಲ್ಲ. ಬಹಳಷ್ಟು ನಾಯಕರು ಜೆಡಿಎಸ್‌ನಿಂದ ಕಾಂಗ್ರೆಸ್ ಕಡೆ ಬರುತ್ತಿದ್ದಾರೆ. ಯಾರು ಮೈತ್ರಿ ಸರ್ಕಾರ ಕಿತ್ತು ಹಾಕಿದರೋ ಅವರ ಜತೆಗೆ ನೆಂಟಸ್ತಿಕೆ ಮಾಡಿಕೊಂಡಿದ್ದಾರೆ. ಎಂತಹ ನೀಚ ರಾಜಕೀಯ ನಡೆಯುತ್ತಿದೆ ಅಂತಾ ಜೆಡಿಎಸ್ ಕಾರ್ಯಕರ್ತರು‌ ಬೇಸರಗೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರ, ಕೋಲಾರ ಭಾಗದ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು.  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಕ್ಕಲಿಗರಿಗೆ ಹೆಚ್ಚು ಸೀಟ್ ಕೊಟ್ಟಿದೆ. ದಳದವರು ಕೇವಲ ಕುಟುಂಬದವರಿಗೆ ಟಿಕೆಟ್ ಕೊಟ್ಟಿದ್ದಾರೆ. ಮುಂದೆ ರಾಜ್ಯದಲ್ಲಿ ಜೆಡಿಎಸ್ ಇರುವುದಿಲ್ಲ ಎಂದರು.
ಸಚಿವ ಕೃಷ್ಣಬೈರೇಗೌಡ ಮಾತಮಾಡಿ, ಜೆಡಿಎಸ್‌ನ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡರು‌ ಜೆಡಿಎಸ್ ಇನ್ನು ಮುಂದೆ ಇರೋದಿಲ್ಲ ಎಂದು ಕಾಂಗ್ರೆಸ್ ಸೇರುತ್ತಿದ್ದಾರೆ. ಈ ಕುಮಾರಣ್ಣ ಯಾಕೆ ಹೋಗಿ ಬಿಜೆಪಿಯವರ ಸಹವಾಸ ಮಾಡಿದರೋ ಗೊತ್ತಿಲ್ಲ. ಬಿಜೆಪಿಯವರ ವರಸೆನೆ ಹಾಗೇ, ಎಲ್ಲಾ ಸೇರಿಸಿಕೊಂಡು ಕೊನೆಗೆ ಜೆಡಿಎಸ್​​ನ್ನು ನೇತು ಹಾಕಿ ಹೋಗಿ ಬಿಡುತ್ತಾರೆ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೈ ಬಂಡಾಯ ಅಭ್ಯರ್ಥಿಯಾಗಿ ಶಿಡ್ಲಘಟ್ಟದಲ್ಲಿ ಸ್ಪರ್ಧಿಸಿದ್ದ ಪುಟ್ಟ ಆಂಜಿನಪ್ಪ ಕಾಂಗ್ರೆಸ್ ಸೇರ್ಪಡೆಗೊಂಡರು.
ಮೋದಿ ಪಿಎಂ ಆದ್ರೆ..ಚಿಕನ್‌, ಮಟನ್‌ ತಿನ್ನೋದು ಬ್ಯಾನ್‌!; ಚುನಾವಣಾ ಪ್ರಚಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − nine =
Remember me
