ಬೆಂಗಳೂರು:ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಪಕ್ಷಗಳಾದ ಬಿಜಪಿ ಹಾಗೂ ಜೆಡಿಎಸ್​ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನ್ಕಕೆ ಕಾಲಿಟ್ಟಿದ್ದು, ಇದರ ಬೆನ್ನಲ್ಲೇ ಕೇಂದ್ರ ಸಸಿವ ಎಚ್​.ಡಿ. ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್​ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್​, ನೀನು ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ, ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು. ನಿನ್ನ ಅಧಿಕಾರವಧಿಯಲ್ಲಿ ನಿನ್ನ ಸಹೋದರ ಹೇಗೆ ಅಧಿಕಾರ ದುರುಪಯೋಗ ಮಾಡಿಕೊಂಡ ಎಂಬುದಕ್ಕೆ ಮೊದಲು ಲೆಕ್ಕಾಚಾರ ಹಾಕೋಣ. ಆನಂತರ ನನ್ನದು ಕೊಡುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ.
ಇದನ್ನೂ ಓದಿ:ಯಾದಗಿರಿ PSI ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಸಿಸಿಬಿ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು
ಕುಮಾರಸ್ವಾಮಿ ನನ್ನ ಪ್ರಶ್ನೆ ಮಾಡುತ್ತಾನೆ. ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೇ. ಆದರೆ ಮೊದಲು ಅವನ ಸಹೋದರನ ಆಸ್ತಿ ಬಗ್ಗೆ ಮೊದಲು ಉತ್ತರ ನೀಡಲಿ. ಜೆಡಿಎಸ್, ಬಿಜೆಪಿ ಹಗರಣಗಳಿಗೆ ಉತ್ತರ ಕೊಡಿ ಎಂದು ಕೇಳಿದರೂ ಇದುವರೆಗೂ ಉತ್ತರ ಕೊಟ್ಟಿಲ್ಲ. ವಿಜಯೇಂದ್ರ ಹೇಳುತ್ತಾನೆ ಭ್ರಷ್ಟಾಚಾರದ ಪಿತಾಮಹಾ ನಾನು ಎಂದು. ನೀನು ಮೊದಲು ಹೇಳಪ್ಪ, ನೀನು ನಿಮ್ಮಪ್ಪನನ್ನು ಯಾಕೆ ಜೈಲಿಗೆ ಕಳುಹಿಸಿ ರಾಜೀನಾಮೆ ಕೊಡಿಸಿದೆ. ನನ್ನನ್ನು ಪ್ರಶ್ನಿಸುವ ಬದಲು ಮೊದಲು ನಿಮ್ಮ ಪಕ್ಷದ ಯತ್ನಾಳ್, ಗೂಳಿಹಟ್ಟಿ ಶೇಖರ್​ಗೆ ಮೊದಲು ಉತ್ತರ ಕೊಡಿ ಆನಂತರ ನನ್ನನ್ನು ಪ್ರಶ್ನಿಸುವಂತೆ.
ಕೇಂದ್ರ ಸರ್ಕಾರದಿಂದ ಕರ್ನಾಟಕದ ಪಾಲಿನ ಅನುದಾನ ಬಿಡುಗಡೆ ಮಾಡಿಸಿಲ್ಲ ಹಾಗೂ ನಾವು ವಿರೋಧ ಪಕ್ಷದಲ್ಲಿ ಇದ್ದಾಗ ಏನೇನು ಮಾಡಿದ್ದರು ಅದಕ್ಕೆಲ್ಲ ಉತ್ತರ ಕೊಡಿ ಎಂದು ಕೇಳುತ್ತಿದ್ದೇವೆ. ಇದಕ್ಕಾಗಿ ಜನಾಂದೋಲನ ಸಭೆ ನಡೆಸುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಬಿಜೆಪಿ-ಜೆಡಿಎಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 + 18 =
Remember me
