ಬೆಂಗಳೂರು:ರಾಜಧಾನಿಯಲ್ಲಿ ಕುಡಿಯುವ ನೀರಿನ ದರ ಏರಿಕೆ ಮಾಡುವ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನೂ ಓದಿ:ಜಾರ್ಖಂಡ್: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಶಂಕೆ, 7 ಮಂದಿಯ ಬಂಧನ
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಕರ್ನಾಟಕ ಬಿಜೆಪಿ ಮೂರು ಬಿಟ್ಟವರು ಊರಿಗೆ ದೊಡ್ಡವರು. ಡಿಕೆ ಶಿವಕುಮಾರ್ ಜನರ ಪೀಡಕರಂತೆ ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
ಜನರ ಪೀಡಕರಂತೆ ವರ್ತಿಸುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಂಥವರನ್ನು ನೋಡಿಯೇ ‘ಮೂರು ಬಿಟ್ಟವರು ಊರಿಗೆ ದೊಡ್ಡವರು’ ಎನ್ನುವು ನಾಣ್ನುಡಿ ಬರೆದಂತೆ ತೋರುತ್ತಿದೆ. ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ದರ್ಪದ ಮಾತುಗಳನ್ನು ಆಡುತ್ತಲೇ ಇದೀಗ ಕುಡಿಯುವ ನೀರಿನ ಬೆಲೆ ಏರಿಕೆ ಮಾಡಿ ಬೆಂಗಳೂರಿಗರ ಜೇಬಿಗೆ ಕತ್ತರಿ ಪ್ರಯೋಗಕ್ಕೆ ಮುಂದಾಗಿದ್ದಾರೆ. ಬೆಂಗಳೂರಿಗೆ ಬದುಕು ಕಟ್ಟಿಕೊಳ್ಳಲು ಬಂದಿರುವ ಜನಸಾಮಾನ್ಯರು ಬೆಲೆ ಏರಿಕೆಯ ಭೂತವಾಗಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿಯುವ ಕಾಲ ದೂರವಿಲ್ಲ! ಎಂದು ಬಿಜೆಪಿ ಉಲ್ಲೇಖಿಸಿದೆ.
ಬೆಂಗಳೂರು: ಸಾರ್ವಜನಿಕರು ಬೈದರೂ, ವಿರೋಧ ಪಕ್ಷದವರಾದರು ವಿರೋಧ ಮಾಡಿದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಗುರುವಾರ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಧ್ಯಮದವರು ಬೈಯಲಿ, ಜನ ವಿರೋಧ ವ್ಯಕ್ತಪಡಿಸಲಿ, ವಿಪಕ್ಷಗಳು ಟೀಕಿಸಲಿ, ತಲೆಕೆಡಿಸಿಕೊಳ್ಳುವುದಿಲ್ಲ. ನೀರಿನ ದರ ಹೆಚ್ಚಳ ಮಾಡುತ್ತೇವೆ ಎಂದು ಖಡಕ್​ ಆಗಿಯೇ ಉತ್ತರಿಸಿದರು.
ನಾಗರಿಕರಿಗೆ ಎಷ್ಟೇ ಮಾಡಿದರೂ ಉಪಕಾರ ಸ್ಮರಣೆ ಇಲ್ಲ. ಎಷ್ಟೇ ಒಳ್ಳೆಯದು ಮಾಡಿದರೂ ಬೈತಾರೆ, ಕಮೆಂಟ್​ ಮಾಡುತ್ತಾರೆ. ಬಿಲ್ ಪಾವತಿಸುವರು ಪಾವತಿ ಮಾಡುತ್ತಾರೆ. ಕೆಲವರು ಪಾವತಿ ಮಾಡಲ್ಲ ನಂತರ ಮರೆತು ಬಿಡ್ತಾರೆ. ಕಂಪನಿ ಉಳಿಯಬೇಕಾಗಿದೆ ಅದಕ್ಕಾಗಿ ನಾವು ನೀರಿನ ದರ ಹೆಚ್ಚಳ‌ ಮಾಡಿಯೇ ಮಾಡುತ್ತೇವೆ ಎಂದು ಡಿಕೆಶಿ ಹೇಳಿದರು.
ಮುಡಾ ಹಗರಣ: ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ: ಗೃಹ ಸಚಿವ ಪರಮೇಶ್ವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
