ಹುಬ್ಬಳ್ಳಿ:“ಈಗಾಗಲೇ ಮಂತ್ರಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿದ್ದೇವೆ. ಅವರು ನಮಗೆ ವರದಿ ನೀಡಲಿದ್ದಾರೆ. ಶೆ.75ರಷ್ಟು ಮಂದಿ ನಮ್ಮ ಕಾರ್ಯಕರ್ತರು, ಶಾಸಕರು, ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದೆಹಲಿ ನಾಯಕರು ನಮಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಕೆಲವು ಮಾನದಂಡ ನಿಗದಿ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮೀಕ್ಷೆ ಎಲ್ಲಿಯವರೆಗೂ ಬಂದಿದೆ ಎಂದು ಮಾಧ್ಯಮದವರು ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಶ್ನಿಸಿದಾಗ ಅವರು ಈ ಮೇಲಿನಂತೆ ಉತ್ತರಿಸಿದರು.
ಪಕ್ಷದಲ್ಲಿ ಇರುವ ಅಸಮಾಧಾನ ಹೇಗೆ ಪರಿಹರಿಸಿಕೊಳ್ಳುತ್ತೀರಿ ಎಂದು ಕೇಳಿದಾಗ, “ನಮ್ಮ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ? ಬಿಜೆಪಿಯಲ್ಲಿ ಅಸಮಾಧಾನ ಇದ್ದು, ಅದರಿಂದ ಅವರ ನಾಯಕರ ಆಯ್ಕೆ ಮಾಡಲು ಆಗುತ್ತಿಲ್ಲ. ಈ ಬಗ್ಗೆ ನೀವು ಪ್ರಶ್ನೆ ಮಾಡುತ್ತಿಲ್ಲ. ಸರ್ಕಾರ ರಚನೆ ಆಗಿ ಐದಾರು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ಆಗದ ಇತಿಹಾಸವನ್ನು ರಾಜ್ಯ ಅಥವಾ ದೇಶದಲ್ಲಿ ನೋಡಿದ್ದೀರಾ?” ಎಂದು ತಿಳಿಸಿದರು.
ಬಿಜೆಪಿ ಬರ ಅಧ್ಯಯನ ಪ್ರವಾಸದ ಬಗ್ಗೆ ಕೇಳಿದಾಗ, “ಅವರು ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿ. ನಮ್ಮ ಸಚಿವರಾದ ಚೆಲುವರಾಯ ಸ್ವಾಮಿ ಹಾಗೂ ಕೃಷ್ಣಭೈರೇಗೌಡ ಅವರು ಅಧ್ಯಯನ ಮಾಡಿ ಸುಮಾರು 200 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಅವರು ಸುಮ್ಮನೆ ಘೋಷಣೆ ಮಾಡಿದ್ದಾರಾ? ಮಂಡ್ಯ, ಹಾವೇರಿ ಹಾಗೂ ಇತರ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಯುತ್ತಿದೆ” ಎಂದು ತಿಳಿಸಿದರು.
ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಹೋಗಿದೆ ನಂತರ ಏನಾಯ್ತು ಎಂದು ಕೇಳಿದಾಗ, “ನಾವು ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ್ದೇವೆ. ನಾವು ಸಾವಿರ ಕೋಟಿಯಷ್ಟು ಹಣವನ್ನು ಮೀಸಲು ಇಟ್ಟಿದ್ದೇವೆ” ಎಂದು ತಿಳಿಸಿದರು.
‘ನಾನು ಸಿಎಂ ಆಕಾಂಕ್ಷಿ, ಹೈಕಮಾಂಡ್ ಸೂಚಿಸಿದರೆ…’:ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
