ಬೆಂಗಳೂರು: ಸಮಸಮಾಜ ನಿರ್ಮಾಣದ ಸದುದ್ದೇಶ ಹೊಂದಿರುವುದಾಗಿ ಹೇಳುತ್ತಿರುವ ಸಿ.ಎಂ. ಸಿದ್ದರಾಮಯ್ಯನವರು ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯಂತಹ ಅಸಮಾನ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬಾರದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ರಾಜ್ಯದ ಜನರ ತೆರಿಗೆ ಹಣವನ್ನು ಕೇವಲ ಬೆಂಗಳೂರನ್ನು ವಿಸ್ತರಿಸಲು ವಿನಿಯೋಗಿಸಿದರೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ ಭಾಗದ ಜನರು ಏನು ಮಾಡಬೇಕು? ಈಗಾಗಲೇ ಹೆಚ್ಚಿನ ಯುವಕರು ಉದ್ಯೋಗಕ್ಕಾಗಿ ದೂರದ ಬೆಂಗಳೂರನ್ನು ಆಯ್ಕೆ ಮಾಡುವ ಬದಲು ಹೈದರಾಬಾದ್, ಪುಣೆ, ಮುಂಬೈ, ಪಣಜಿಯಂತಹ ನೆರೆ ರಾಜ್ಯದ ನಗರಗಳನ್ನು ಕಡೆ ಮುಖ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯಿಂದ ಯುವಕರೆಲ್ಲ ಬೇರೆ ರಾಜ್ಯಗಳಿಗೆ ಗುಳೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಆರೋಪಿಸಿದರು.
ನೂತನ ವಿಮಾನ ನಿಲ್ದಾಣವನ್ನು ತುಮಕೂರು ಅಥವಾ ರಾಮನಗರದಲ್ಲಿ ನಿರ್ಮಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದೂ ಕೂಡ ಬೆಂಗಳೂರು ಕೇಂದ್ರೀಕರಿಸಿದ ಅಭಿವೃದ್ಧಿಯ ಭಾಗವಾಗಿದೆ. ಮಧ್ಯ ಕರ್ನಾಟಕಕ್ಕೆ ಪ್ರಾಶಸ್ತಯ ನೀಡಬೇಕಿದೆ. ನೂತನ ವಿಮಾನ ನಿಲ್ದಾಣವು ಮಧ್ಯ ಕರ್ನಾಟಕ ಭಾಗದಲ್ಲಿ ನಿರ್ಮಿಸಬೇಕು ಎಂದು ಆಗ್ರಹಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಡೀ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿದ್ದಾರೆಯೋ ಅಥವಾ ಕೇವಲ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಹಾರೋಹಳ್ಳಿಗಳಿಗೆ ಸೀಮಿತಗೊಂಡ ಉಪಮುಖ್ಯಮಂತ್ರಿಯಾಗಿದ್ದಾರೆಯೋ ಎಂಬ ಅನುಮಾನ ಮೂಡುತ್ತಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಹೊರಟಿರುವ ನಿರ್ಧಾರ ಆಕ್ಷೇಪಾರ್ಹವಾಗಿದೆ. ಕೇವಲ ಹೆಸರು ಬದಲಿಸುವುದರಿಂದ ಅಭಿವೃದ್ಧಿಯಾಗುವುದಿದ್ದರೆ ಕರ್ನಾಟಕದ ಹೆಸರನ್ನೇ ಬೆಂಗಳೂರು ಎಂದು ಮಾಡುವುದು ಒಳಿತಲ್ಲವೇ? ಆಗ ಇಡೀ ಕರ್ನಾಟಕವೇ ಅಭಿವೃದ್ಧಿಯಾದಂತೆ ಆಗುತ್ತದೆಯಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳ ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿರುವುದು ಕೇವಲ ಜಿಲ್ಲೆಯ ಹೆಸರು ಬದಲಾವಣೆಯಾಗಿಲ್ಲ, ಕರಾಳ ರಿಯಲ್ ಎಸ್ಟೇಟ್ ದಂಧೆಗೆ ಪರವಾನಗಿ ಪಡೆಯುವ ಪ್ರಸ್ತಾವನೆಯಾಗಿದೆ. ರಾಮನಗರವನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸಿ, ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಿದರೆ ಕೆಲವೇ ಕೆಲವು ಭೂಮಾಲೀಕರಿಗೆ ಅನುಕೂಲವಾಗಲಿದೆಯೇ ಹೊರತು ಸಾಮಾನ್ಯ ಜನರಿಗೆ ಯಾವುದೇ ಉಪಯೋಗವಿಲ್ಲ. ತಮ್ಮ ಆಧಾರ್ ಸೇರಿದಂತೆ ಮತ್ತಿತರ ದಾಖಲೆ ಪತ್ರಗಳಲ್ಲಿ ಜಿಲ್ಲೆ ಹೆಸರನ್ನು ತಿದ್ದಿಸುವ ಸಲುವಾಗಿ ಸರ್ಕಾರಿ ಕಚೇರಿಗಳನ್ನು ಅಲೆಯಬೇಕಾದ ಪರಿಸ್ಥಿತಿ ಬಂದೊದಗುತ್ತದೆ ಆರೋಪಿಸಿದರು.
ನಿಜಕ್ಕೂ ಅಭಿವೃದ್ಧಿಪಡಿಸುವುದಿದ್ದರೆ, ಹೊಸ ಇಂಡಸ್ಟ್ರಿಗಳನ್ನು ಸ್ಥಾಪಿಸಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದಿದ್ದರೆ, ಜನಸಾಮಾನ್ಯರಿಗೆ ನೆರವಾಗುವುದಿದ್ದರೆ ಹುಬ್ಬಳ್ಳಿ-ಧಾರವಡ ಅವಳಿ ನಗರಗಳಂತೆ ರಾಮನಗರ-ಚನ್ನಪಟ್ಟಣವನ್ನು ಅಭಿವೃದ್ಧಿ ಪಡಿಸಬಹುದು. ಆದರೆ ಆ ಭಾಗದ ಜನರನ್ನು ಉದ್ಧರಿಸುವ ಯಾವ ಯೋಚನೆಯೂ ಶಿವಕುಮಾರ್ ಅವರಿಗೆ ಇದ್ದಂತಿಲ್ಲ. ಅಲ್ಲಿನ ಭೂಮಾಲೀಕರಿಗೆ ಲಾಭವನ್ನು ಮಾಡಿಕೊಡುವ ಮೂಲಕ ತನ್ನ ರಾಜಕೀಯ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುವ ತಂತ್ರವನ್ನು ಹೆಣೆದಿದ್ದಾರೆ. ಈ ಭಾಗವು ಹೆಚ್ಚಿನ ರಾಜಕಾರಣಿಗಳ ಲ್ಯಾಂಡ್ ಬ್ಯಾಂಕ್ ಆಗಿರುವುದರಿಂದ ಅವರಿಗೆ ಅನುಕೂಲ ಮಾಡಿಕೊಟ್ಟರೆ ತನ್ನ ಭವಿಷ್ಯದ ರಾಜಕೀಯ ಆಕಾಂಕ್ಷೆಯನ್ನು ಈಡೇರಿಸಿಕೊಳ್ಳಬಹುದು ಎಂಬ ಕೇಡು ಆಲೋಚನೆ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಮನಗರ, ಚನ್ನಪಟ್ಟಣಗಳನ್ನು ಬೆಂಗಳೂರಿಗೆ ಸೇರಿಸುವ ಪ್ರಸ್ತಾವವನ್ನು ತಿರಸ್ಕರಿಸಬೇಕು. ಹುಬ್ಬಳ್ಳಿ-ಧಾರವಾಡ ಮಾದರಿಯಲ್ಲಿ ಉಭಯ ನಗರಗಳನ್ನು ಅಭಿವೃದ್ಧಿ ಪಡಿಸಬೇಕು ಎಂಬುದು ಆಗ್ರಹಿಸಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 11 =
Remember me
