ಬೆಂಗಳೂರು:ರಾಜ್ಯದಲ್ಲಿ ಹಿಜಾಬ್​-ಹಲಾಲ್​ ಬಳಿಕ ಉಂಟಾಗಿರುವ ಲೌಡ್​ಸ್ಪೀಕರ್​ ವಿವಾದ ಮತ್ತೊಂದು ಕೋಮುಸಂಘರ್ಷಕಕ್ಕೆ ಎಡೆ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ, ಅದು ಮುಂದೆ ರಾತ್ರಿ ನಾಟಕಗಳಿಗೂ ಸಂಚಕಾರ ತರಲಿವೆಯೇ ಎಂಬ ಆತಂಕ ಮೂಡಿಸಿದೆ.
ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕ ಹಾಕುವ ಕುರಿತ ಉಂಟಾಗಿರುವ ವಿವಾದದ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್​ಪಿ ವಂಶಿಕೃಷ್ಣ, ಇದುವರೆಗೆ ಆ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಇಂದು ಜಿಲ್ಲಾಡಳಿತ ಭವನದಲ್ಲಿ ವಿವರ ನೀಡಿದರು.
ಎಲ್ಲೆಲ್ಲಿ ಲೌಡ್ ಸ್ಪೀಕರ್ ಬಳಕೆ ಮಾಡುತ್ತಾರೋ ಅವರಿಗೆಲ್ಲ ಈಗಾಗಲೇ ನೋಟಿಸ್ ನೀಡಲಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 156 ಮಸೀದಿಗಳು, 171 ದೇವಸ್ಥಾನಗಳು, 41 ಚರ್ಚ್​ಗಳು ಸೇರಿ ಒಟ್ಟು 374 ನೋಟಿಸ್ ನೀಡಲಾಗಿದೆ, ಜತೆಗೆ 14 ಬಾರ್​ಗಳು ಮತ್ತು ಒಂದು ರೆಸ್ಟೋರೆಂಟ್​ಗೂ ನೀಡಲಾಗಿದೆ ಎಂದು ಅವರು ತಿಳಿಸಿದರು.
ಧ್ವನಿವರ್ಧಕದ ಸಂಬಂಧ ಹೈಕೋರ್ಟ್ ನಿರ್ದೇಶನವಿದೆ. ಹೀಗಾಗಿ ನಿಯಮ ಮೀರುವವರ ವಿರುದ್ಧ ಕಾನೂನುಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು ಹಳ್ಳಿಗಳಲ್ಲಿ ರಾತ್ರಿ ಹೊತ್ತು ನಡೆಯುವ ನಾಟಕಗಳ ಕುರಿತ ಪ್ರಶ್ನೆಗೂ ಪ್ರತಿಕ್ರಿಯಿಸಿದರು.
ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ಶಬ್ದ ಬಳಕೆ ಮಾಡಬಾರದು ಎಂದು ನಿಯಮವಿದೆ. ಹೀಗಾಗಿ ಅದರ ಬಗ್ಗೆ ಕೂಡ ಚರ್ಚೆ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದ್ದು, ಇನ್ನು ರಾತ್ರಿಯ ಸಂದರ್ಭದಲ್ಲಿ ನಾಟಕ ಕೂಡ ಆಡಲು ಅವಕಾಶ ಇರುತ್ತದೋ ಇಲ್ಲವೋ ಎಂಬ ಆತಂಕ ಮೂಡಿದೆ.
ಅಡವಿಟ್ಟ ಚಿನ್ನ ಕೊಡಲ್ಲ ಎಂದ ಅಧಿಕಾರಿ; ಬ್ಯಾಂಕ್​ ಎದುರೇ ವಿಷ ಕುಡಿಯಲು ಮುಂದಾದ ರೈತ

ಭೀಕರ ಅಪಘಾತ; ಮಗುಚಿ ಬಿದ್ದ ಲಾರಿ, ಒಬ್ಬ ಸ್ಥಳದಲ್ಲೇ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 3 =
Remember me
