ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ):ಪ್ರಯಾಣಿಕರೊಬ್ಬರು ಊರಿಗೆ ಹೊರಡುವ ಗಡಿಬಿಡಿಯಲ್ಲಿ ಪಾರ್ಕಿಂಗ್​ ಲಾಟ್​ನಲ್ಲಿ ಸಾಕುನಾಯಿಯನ್ನು ಬಿಟ್ಟು ಪ್ರಯಾಣಿಸಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಪ್ರಕರಣ ಸಂಬಂಧ ನಾಯಿಯ ಮಾಲೀಕ ವಿಕ್ರಂ ರಾಮದಾಸ್​ ಲಿಂಗೇಶ್ವರ್​(41) ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು ಕಲ್ಯಾಣನಗರದ ನಿವಾಸಿ ವಿಕ್ರಂ ರಾಮದಾಸ್​ ಲಿಂಗೇಶ್ವರ್​ ಸೋಮವಾರ ಕೊಯಮತ್ತೂರಿಗೆ ತೆರಳಬೇಕಿದ್ದ ಕಾರಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಕಿಂಗ್​ನಲ್ಲಿ ಕಾರು ನಿಲ್ಲಿಸಿ ವಿಂಡೋ ಲಾಕ್​ ಮಾಡಿ ಅದರಲ್ಲಿಯೇ ತಮ್ಮ ಗ್ರೇಟ್​ ಡೇನ್​ ತಳಿಯ ಸಾಕು ನಾಯಿಯನ್ನೂ ಬಿಟ್ಟು ತೆರಳಿದ್ದಾರೆ.
ಕಾರಿನ ವಿಂಡೋ ಲಾಕ್​ ಮಾಡಿದ್ದ ಪರಿಣಾಮ ಉಸಿರಾಡಲು ಸಾಧ್ಯವಾಗದೆ ನಾಯಿ ತೀವ್ರವಾಗಿ ನಿತ್ರಾಣಗೊಂಡಿತ್ತು. ಎರಡ್ಮೂರು ತಾಸು ಉಸಿರಾಡಲು ಗಾಳಿ ಇಲ್ಲದ ಕಾರಣ ನಾಯಿಯ ಮೂಗಿನಿಂದ ರಕ್ತ ಬರಲು ಶುರುವಾಗಿತ್ತು. ಗಸ್ತಿನಲ್ಲಿದ್ದ CISF ಸಿಬ್ಬಂದಿ ಕಾರಿನಲ್ಲಿ ನಾಯಿ ಬೊಗಳುತ್ತಿರುವುದನ್ನೂ ಗಮನಿಸಿ ಕಿಟಕಿ ಗಾಜನ್ನೂ ಒಡೆದು ಶ್ವಾನವನ್ನು ರಕ್ಷಿಸಿದ್ದಾರೆ.
ಇದನ್ನೂ ಓದಿ:ನಮ್ಮ ವಿರುದ್ಧ ಆರೋಪ ಮಾಡಿದವರು ಈಗ ಕಮಿಷನ್​ಗಾಗಿ ಕಿರುಕುಳ ಕೊಡುತ್ತಿದ್ದಾರೆ: ಸಿ.ಟಿ. ರವಿ
ನಾಯಿಯನ್ನೂ ರಕ್ಷಿಸಿದ ಬಳಿಕ CISF ಸಿಬ್ಬಂದಿ ಚಾರ್ಲಿ ಎಂಬ ಸ್ವಯಂ ಸೇವಾ ಸಂಸ್ಥೆ(NGO)ಗೆ ಕರೆ ಮಾಡಿ ಚಿಕಿತ್ಸೆಗೆ ಕಳುಹಿಸಿಕೊಟ್ಟಿದ್ದಾರೆ. ರಾತ್ರಿ 9 ಘಂಟೆ ಸುಮಾರಿಗೆ ನಾಯಿಯ ಮಾಲೀಕ ವಿಕ್ರಂ ಕೊಯಮತ್ತೂರಿನಿಂದ ವಾಪಸ್​ ಆದ ಬಳಿಕ CISF ಸಿಬ್ಬಂದಿ ಆತನನ್ನೂ ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ನಾಯಿ ಮಾಲೀಕನನ್ನೂ ವಶಕ್ಕೆ ಪಡೆದ ಪೊಲೀಸರು ವಿಕ್ರಂ ವಿರುದ್ಧ ಭಾರತೀಯ ದಂಡ ಸಂಹಿತೆ 11(1)(A) ಅಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ಕೊಟ್ಟು ಸ್ಟೇಷನ್​ ಬೇಲ್​ ಮೇಲೆ ಬಿಟ್ಟು ಕಳುಹಿಸಿದ್ದಾರೆ. ಅಸ್ವಸ್ಥಗೊಂಡಿದ್ದ ನಾಯಿಗೆ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದೆ ಎಂದು ಭದ್ರತಾ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
