ಬೆಂಗಳೂರು:ಕರೊನಾ ವೈರಸ್ ಹಬ್ಬುತ್ತಿರುವುದಕ್ಕಿಂತ ವೇಗವಾಗಿ ಅದಕ್ಕೆ ಸಂಬಂಧಪಟ್ಟ ರೂಮರ್​ಗಳು, ಗಾಳಿಸುದ್ದಿಗಳು ಹರಡುತ್ತಿವೆ.
ಸಾಮಾಜಿಕ ಜಾಲತಾಣಗಳಲ್ಲಂತೂ ಹಲವರು ಕರೊನಾ ತಜ್ಞರಾಗಿದ್ದನ್ನು ಕಾಣಬಹುದು. ಇಲ್ಲಸಲ್ಲದ ಮೆಸೇಜ್​ಗಳನ್ನು ಹರಿಬಿಡುತ್ತಿದ್ದಾರೆ. ಕರೊನಾ ನಿಯಂತ್ರಣಕ್ಕಿಂತ ಸರ್ಕಾರದ ಪಾಲಿಗೆ ಈ ವದಂತಿಗಳಿಂದ ಜನರು ಗಾಬರಿಯಾಗುವುದನ್ನು ತಪ್ಪಿಸುವುದೇ ದೊಡ್ಡ ಕೆಲಸವಾದಂತಾಗಿದೆ.
ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪನರು ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.
ಕರೊನಾಗೆ ಸಂಬಂಧಪಟ್ಟಂತೆ ಸರ್ಕಾರದ ಅಧಿಕೃತ ಸೂಚನೆ, ಮಾಹಿತಿಗಳನ್ನು ಹೊರತುಪಡಿಸಿದರೆ ಇನ್ಯಾವುದೇ ವದಂತಿಗಳನ್ನು ನಂಬಬೇಡಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ, ನೀವು ಯಾವುದೇ ವಿಚಾರವನ್ನು ನಮಗೆ ತಿಳಿಸಬೇಕೆಂದರೂ ಆರೋಗ್ಯ ಇಲಾಖೆಯ ಸಹಾಯವಾಣಿ 104ಕ್ಕೆ ಕರೆ ಮಾಡಿ ಎಂದು ತಿಳಿಸಿದ್ದಾರೆ.
ಕರೊನಾ ನಿಯಂತ್ರಣಕ್ಕಾಗಿ ಸರ್ಕಾರ ಎಲ್ಲರೀತಿಯ ಕ್ರಮಗಳನ್ನೂ ಕೈಗೊಂಡಿದ್ದು, ಯಾರೂ ಆತಂಕಪಡಬೇಡಿ ಎಂದು ಹೇಳಿದ್ದಾರೆ.
ಹಾಗೇ ಯಡಿಯೂರಪ್ಪನವರು ನೀಡಿದ ಸಲಹೆ ಹೀಗಿದೆ:
https://www.instagram.com/p/B94fJrfnUXM/
2 ಲಕ್ಷದ ಗಡಿ ದಾಟಿದ ಕರೊನಾ ವೈರಸ್​ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆ 8 ಸಾವಿರಕ್ಕೆ ಹತ್ತಿರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − two =
Remember me
