ಬೆಂಗಳೂರು:3 ವರ್ಷಗಳ ಹಿಂದೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಪ್ರೀತಿ ಬಲೆಗೆ ಬಿದ್ದ ಯುವಕ-ಯುವತಿ ಇಬ್ಬರೂ ಪಾಲಕರಿಗೆ ತಿಳಿಸಿದೆ ಮದುವೆ ಆಗಿದ್ದರು. ಆದರೀಗ ಯುವತಿ ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯಕಂಡಿದ್ದಾಳೆ. ಮಗಳ ಸಾವಿಗೆ ನ್ಯಾಯ ಬೇಕೆಂದು ಮೃತಳ ತಂದೆ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದಾರೆ.
ವೈಟ್​ಫೀಲ್ಡ್​ ನಿವಾಸಿ ಸುಜಾತಾ ಆತ್ಮಹತ್ಯೆಗೆ ಶರಣಾದವರು. ಬೇಲೂರು ಮೂಲದ ಭದ್ರೇಗೌಡ ನೀಡಿದ ದೂರಿನ ಆಧಾರದ ಮೇರೆಗೆ ವೈಟ್​ಫೀಲ್ಡ್​ ಠಾಣೆ ಪೊಲೀಸರು ಸುಜಾತ ಪತಿ ಸುಶಾಂತ್​ ವಿರುದ್ಧ ಎಫ್ಐಆರ್​ ದಾಖಲಿಸಿಕೊಂಡಿದ್ದಾರೆ. 3 ವರ್ಷಗಳ ಹಿಂದೆ ಸುಜಾತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆ ವೇಳೆ ಸುಶಾಂತ್​ ಈಕೆಯನ್ನು ಪ್ರೀತಿಸುತ್ತಿದ್ದ. ಪಾಲಕರಿಗೆ ಹೇಳದೆ ಇಬ್ಬರೂ ವಿವಾಹವಾಗಿದ್ದರು. ವೈಟ್​ಫೀಲ್ಡ್​ನಲ್ಲಿ ನೆಲೆಸಿದ್ದ ದಂಪತಿ ಆರಂಭದಲ್ಲಿ ಅನ್ಯೋನ್ಯವಾಗಿದ್ದರು.
ಇದನ್ನೂ ಓದಿರಿರಸ್ತೆಬದಿ ನಿಂತಿದ್ದ ಕಾರಿನಲ್ಲಿತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ದಾಳಿಕೋರರಿಂದ ಬಚಾವ್​ ಆಗಿದ್ದೇ ರೋಚಕ!
ಇತ್ತೀಚೆಗೆ ಪಾಲಕರಿಗೆ ಕರೆ ಮಾಡಿದ್ದ ಸುಜಾತ, “ಪತಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ. ವರದಕ್ಷಿಣೆ ರೂಪದಲ್ಲಿ ತವರು ಮನೆಯಲ್ಲಿರುವ ಆಸ್ತಿಯನ್ನು ತನಗೆ ನೀಡುವಂತೆ ಮಾನಸಿಕ, ದೈಹಿಕ ಹಿಂಸೆ ನೀಡುತ್ತಿದ್ದಾನೆ” ಎಂದಿದ್ದಳು. ಅನುಸರಿಸಿಕೊಂಡು ಹೋಗುವಂತೆ ಪಾಲಕರು ಬುದ್ಧಿಮಾತು ಹೇಳಿದ್ದರು ಎನ್ನಲಾಗಿದೆ.
ಆ.30ರಂದು ನಾದಿನಿಯ ಮಗಳು ಕರೆ ಮಾಡಿ, ”ಸುಜಾತ ಮನೆಯ ಕಿಟಕಿಯ ಸರಳಿಗೆ ವೇಲ್​ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ” ಎಂದಳು. ಈ ಹಿನ್ನೆಲೆಯಲ್ಲಿ ಬೇಲೂರಿನಿಂದ ಬೆಂಗಳೂರಿಗೆ ಬಂದು ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ದೂರಿನಲ್ಲಿ ಭದ್ರೇಗೌಡ ಆರೋಪಿಸಿದ್ದಾರೆ.
ಅಕ್ರಮವಾಗಿ ಮರಳು ತೆಗೆಯಲು ಅಪ್ಪನ ಜತೆ ಹೋಗಿದ್ದ ಯುವತಿ ಅಲ್ಲೇ ಪ್ರಾಣಬಿಟ್ಟಳು!

ರಂಗೇರೇತ್ತಿದೆ ಹಳ್ಳಿ ಫೈಟ್​, ಗ್ರಾಪಂ ಚುನಾವಣೆ ಯಾವಾಗ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
