ಬೆಂಗಳೂರು: ಕನ್ನಡ ಸಾಹಿತ್ಯ ಲೋಕಕ್ಕೆ ಅನುಪಮ ಸೇವೆ ಸಲ್ಲಿಸಿರುವ ಡಾ.ಎಂ.ಎಂ.ಕಲಬುರ್ಗಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗುತ್ತಿರುವ ಡಾ.ಎಂ.ಎಂ.ಕಲಬುರ್ಗಿ ಟ್ರಸ್ಟ್ ಗೆ ಡಾ.ವೀರಣ್ಣ ರಾಜೂರ್ ಅಧ್ಯಕ್ಷತೆಯಲ್ಲಿ 9 ಸದಸ್ಯರ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ.
ಡಾ. ಎಂ.ಎಂ.ಕಲಬುರ್ಗಿ ಪುತ್ರ ಶ್ರೀವಿಜಯ ಕಲಬುರ್ಗಿ, ಶಶಿಧರ್ ತೋಡ್ಕರ್, ಹನುಮಾಕ್ಷಿ ಗೋಗಿ, ಡಾ.ಎಚ್.ಎಸ್.ಮೇಲಿನಮನಿ, ಡಾ. ಬಾಳಣ್ಣ ಶೀಗೀಹಳ್ಳಿ, ಡಾ.ಸಿದ್ದನಗೌಡ ಪಾಟೀಲ್, ಪ್ರೊ. ಚಂದ್ರಶೇಖರ್ ವಸ್ತ್ರದ್ ಅವರನ್ನು ಸದಸ್ಯರಾಗಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧಾರವಾಡದ ಸಹಾಯಕ ನಿರ್ದೇಶಕರನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 7 =
Remember me
